Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಗನಿಗೆ ಗಲ್ಲು, ಅಪ್ಪನಿಗೆ ಜೀವಾವಧಿ ಶಿಕ್ಷೆ: ಭಟ್ಕಳ ಹತ್ಯೆ ಪ್ರಕರಣಕ್ಕೆ ತೀರ್ಪು

Spread the love

ಉತ್ತರ ಕನ್ನಡ: ಆಸ್ತಿಗಾಗಿ ನಾಲ್ವರನ್ನು ಕೊಲೆ ಮಾಡಿದ್ದ ಅಪ್ಪ ಮತ್ತು ಮಗನಿಗೆ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯಶಿಕ್ಷೆ ವಿಧಿಸಿದೆ. ಮಗ ವಿನಯ್ ಭಟ್ಗೆ ಗಲ್ಲು ಶಿಕ್ಷೆ ಮತ್ತು ಅಪ್ಪ ಶ್ರೀಧರ್ ಭಟ್ಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

2023 ರ ಫೆಬ್ರುವರಿ 23 ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದಲ್ಲಿ ನಡೆದಿದ್ದ ಘೋರ ಘಟನೆಗೆ ಕೊನೆಗೂ ನ್ಯಾಯ ಸಿಕ್ಕಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ನಿವಾಸಿಯಾಗಿದ್ದ ಶಂಭು ಭಟ್ ಎಂಬುವರು ಸುಮಾರು 6 ಏಕರೆ ಅಡಿಕೆ ತೋಟ ಹೊಂದಿದ್ದರು. ಶಂಭು ಭಟ್ ಅವರ ಹಿರಿಯ ಮಗ ಶ್ರೀಧರ್ ಭಟ್ ಅನಾರೋಗ್ಯದಿಂದ 2022ರ ಸೆಪ್ಟೆಂಬರ್ 8 ರಂದು ಮೃತಪಟ್ಟಿದ್ದರು. ಮೃತ ಶ್ರೀಧರ ಭಟ್ ಪತ್ನಿ ವಿದ್ಯಾ ಭಟ್ ಆಸ್ತಿಯಲ್ಲಿ ಪಾಲು ಕೊಡುವಂತೆ ಮನೆಯಲ್ಲಿ ನಿತ್ಯ ಜಗಳವಾಡಲು ಪ್ರಾರಂಭಿಸಿದ್ದರು.

ಈ ಹಿನ್ನೆಲೆಯಲ್ಲಿ ವಿದ್ಯಾ ಭಟ್ ಮಾವ ಶಂಭು ಭಟ್ ಅವರು ತಮ್ಮ ಇಬ್ಬರು ಹೆಣ್ಣುಮಕ್ಕಳು ಸೇರಿದಂತೆ ಎಲ್ಲರಿಗೂ ಸಮಾನವಾಗಿ ಆಸ್ತಿ ಹಂಚಿದ್ದರು. ಇದಕ್ಕೆ, “ನಾದಿನಿಯರಿಗೆ ಯಾಕೆ ಆಸ್ತಿಯಲ್ಲಿ ಪಾಲು ಕೊಡುತ್ತೀರಾ?” ಅಂತ ವಿದ್ಯಾ ಭಟ್ ನಿತ್ಯ ಕಿರುಕುಳ ಕೊಡುತ್ತಿದ್ದರು. ಆಸ್ತಿ ವಿಚಾರವಾಗಿ ವಿದ್ಯಾ ಭಟ್ ಪೋಷಕರು ಮತ್ತು ಶಂಭು ಭಟ್ ಅವರ ಕುಟುಂಬದವರ ನಡುವೆ 2023ರ ಫೇಬ್ರುವರಿ 23 ರಂದು ಗಲಾಟೆಯಾಗಿತ್ತು.

ಗಲಾಟೆ ತಾರಕಕ್ಕೇರಿದಾಗ, ಅಪರಾಧಿ ವಿನಯ್ ಭಟ್ ತನ್ನ ಕತ್ತಿಯಿಂದ ಶಂಭು ಭಟ್, ಇವರ ಪತ್ನಿ ಮಹಾದೇವಿ ಭಟ್ ಹಾಗೂ ಕಿರಿಯ ಮಗ ರಾಘವೇಂದ್ರ ಭಟ್ ಅವರನ್ನು ಕೊಚ್ಚಿ ಕೊಲೆ ಮಾಡಿದ್ದು ಸಾಬೀತಾಗಿದೆ. ಇನ್ನು, ರಾಘವೇಂದ್ರನ ಹೆಂಡತಿ ಕುಸುಮಾ ಭಟ್ ಅವರನ್ನು ಅಪರಾಧಿ ಶ್ರೀಧರ್ ಭಟ್ ಕತ್ತಿಯಿಂದ ಕುತ್ತಿಗೆಗೆ ಹೊಡೆದು ಕೊಲೆ ಮಾಡಿರುವುದು ನ್ಯಾಯಾಲಯದಲ್ಲಿ ಸಾಬೀತಾಗಿದೆ.

ಒಟ್ಟಾರೆಯಾಗಿ ತನ್ನ ಪಾಲಿಗೆ ಬಂದ ಆಸ್ತಿಯಲ್ಲಿ ಒಳ್ಳೆಯ ಜೀವನ ಮಾಡುವುದರ ಬದಲು, ಅತಿ ಆಸೆಪಟ್ಟ ವಿದ್ಯಾ ಭಟ್, ಮಾವನ ಕುಟುಂಬವನ್ನ ಮಸಣಕ್ಕೆ ಕಳುಹಿಸಿ, ತಮ್ಮನಿಗೆ ಗಲ್ಲಿಗೆರಿಸಿದರೇ, ತಂದೆಗೆ ಜೀವಂತ ಪರ್ಯಂತ ಜೈಲಿನಲ್ಲೇ ಕೊಳೆಯುವಂತ ಮಾಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *