Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜುಲೈ 12ರಂದು ರಾಜ್ಯವ್ಯಾಪಿ ಬೃಹತ್ ಲೋಕ್ ಅದಾಲತ್ʼ: ಎಲ್ಲಾ ಸಿವಿಲ್-ಕ್ರಿಮಿನಲ್ ಪ್ರಕರಣಗಳಿಗೆ ನಿರ್ಣಾಯಕ ಅವಕಾಶ

Spread the love

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜ್ಯಾದ್ಯಂತ ಜುಲೈ 12 ರಂದು ಬೃಹತ್ ಜನತಾ ನ್ಯಾಯಾಲಯ(Mega Lok Adalath) ನಡೆಯಲಿದೆ.

ಅಂದು ನಡೆಯಲಿರುವ ಬೃಹತ್ ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಎಲ್ಲಾ ವಿಧದ ಸಿವಿಲ್ ವ್ಯಾಜ್ಯಗಳು, ಬಗೆಹರಿಸಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ವಾಹನ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ಕಂದಾಯ ಪ್ರಕರಣಗಳು, ಜನನ ಮತ್ತು ಮರಣ ನೋಂದಣಿ ಪ್ರಕರಣಗಳು, ಜೀವನಾಂಶ ಪ್ರಕರಣಗಳು ಹಾಗೂ ಇನ್ನಿತರೆ ಲಘು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತು ವ್ಯಾಜ್ಯಪೂರ್ವ ಬ್ಯಾಂಕ್ ಸಾಲ ಮರುಪಾವತಿಯ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ

ಸಂಬಂಧಪಟ್ಟ ಕಕ್ಷಿಗಾರರು ವಕೀಲರ ಮೂಲಕ ಅಥವಾ ಖುದ್ದಾಗಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಕೊಳ್ಳಬಹುದಾಗಿದ್ದು, ಇದರ ಸದುಪಯೋಗ ಪಡೆಯುವಂತೆ ಹಾಸನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *