ನಾಳೆಯಿಂದ ರಾಜ್ಯಾದ್ಯಂತ ಕುಟುಂಬ ರಾಜಕಾರಣದ ವಿರುದ್ಧ ಹೋರಾಟ: ಯತ್ನಾಳ್

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಹೊಸ ಹೋರಾಟ ಮಾಡುತ್ತೇನೆ , ಕುಟುಂಬ ರಾಜಕಾರಣ, ಭ್ರಷ್ಟ ರಾಜಕಾರಣದ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯತ್ನಾಳ್ ‘ಯಾವುದೇ ಕಾರಣಕ್ಕೂ ಉಚ್ಚಾಟನೆ ಆದೇಶ ಹಿಂಪಡೆಯುವಂತೆ ಕೇಳಲ್ಲ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯತ್ನಾಳ್ ‘ಯಾವುದೇ ಕಾರಣಕ್ಕೂ ಉಚ್ಚಾಟನೆ ಆದೇಶ ಹಿಂಪಡೆಯುವಂತೆ ಕೇಳಲ್ಲ.
ಬೆಂಬಲಿಗರು ಉಚ್ಚಾಟನೆ ಆದೇಶ ಹಿಂಪಡೆಯುವಂತೆ ಮನವಿ ಮಾಡುತ್ತಿದ್ದಾರೆ, ಆದರೆ ನಾನು ಕೇಳಲ್ಲ, ಈ ವಿಚಾರವಾಗಿ ಹೈಕಮಾಂಡ್ ಬಳಿ ಕೇಳಿಕೊಂಡು ಹೋಗಲ್ಲ ಎಂದರು.
ಜನ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ನಾಳೆಯಿಂದ ಹೊಸದಾಗಿ ಹೋರಾಟ ಆರಂಭಿಸುವೆ.ಯಡಿಯೂರಪ್ಪ ಕುಟುಂಬ ರಾಜಕಾರಣದಿಂದ ಪಕ್ಷಕ್ಕೆ ಹಾನಿಯಾಗಿದೆ. ರಿಪೇರಿ ಮಾಡುವ ಕೆಲಸ ಮಾಡುತ್ತೇನೆ .ಇಂದಿನಿಂದ ಯಡಿಯೂರಪ್ಪನವರ ಕುಟುಂಬದ ಅಂತ್ಯ ಆರಂಭ ಎಂದರು.
ನಾನು ಹೊಸ ಪಕ್ಷ ಕಟ್ಟಲ್ಲ, ಉಚ್ಚಾಟನೆ ಆದೇಶ ವಾಪಸ್ ಪಡೆಯಿರಿ ಅಂತ ಕೇಳಿಕೊಂಡು ಹೈಕಮಾಂಡ್ ಬಳಿ ಹೋಗಲ್ಲ. ನನ್ನ ಹೋರಾಟ ಮುಂದುವರೆಯುತ್ತದೆ ಎಂದರು.