ಮಂಗಳೂರು: 1,650 ಫಾಲೋವರ್ಗಳ ಇನ್ಸ್ಟಾಗ್ರಾಂ ಖಾತೆ ರದ್ದು

ಮಂಗಳೂರು:ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದ್ವೇಷ ಭಾವನೆ ಹುಟ್ಟುವಂತೆ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ಗಳನ್ನು ಹಾಕುತ್ತಿದ್ದ “ಟೀಮ್ ಕರ್ಣ ಸುರತ್ಕಲ್’ ಎಂಬ ಖಾತೆಯನ್ನು ರದ್ದು (ಡಿ ಆಯಕ್ಟಿವೇಟ್) ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಪೇಜ್ನಲ್ಲಿ ಸುಮಾರು 1,650 ರಷ್ಟು ಸಂಖ್ಯೆಯ ಫಾಲೋವರ್ಸ್ ಇದ್ದರು. ಪೇಜ್ ವಿರುದ್ದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಬಳಿಕ ತನಿಖೆಯನ್ನು ಮಂಗಳೂರು ನಗರ ಸೆನ್ ಅಪರಾಧ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ತನಿಖೆ ಕೈಗೊಳ್ಳಲಾಗಿತ್ತು.
ಪೇಜ್ನ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಪಟ್ಟ ಲಾ ಎನ್ಫೋರ್ಸ್ಮೆಂಟ್ ಏಜೆನ್ಸಿಗೆ ಪತ್ರ ವ್ಯವಹಾರ ನಡೆಸಲಾಗಿತ್ತು. ಅದರಂತೆ ಏಜೆನ್ಸಿಯವರು ಇನ್ ಸ್ಟಾಗ್ರಾಂ ಪೇಜನ್ನು ದೇಶದಲ್ಲಿ ಕಾರ್ಯ ನಿರ್ವಹಿಸದಂತೆ ರದ್ದುಗೊಳಿಸಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ. ಪ್ರಕರಣದ ತನಿಖೆಯನ್ನು ಸೆನ್ ಠಾಣೆಯಲ್ಲಿ ಮುಂದುವರಿಸಲಾಗಿದೆ