Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಂಗಳೂರಿಗೆ ಪಾರ್ಸೆಲ್ ಆಗಲು ಚೀಲದೊಳಗೆ ಕುಳಿತಿದ್ದ ವೃದ್ಧ; ಗಾಬರಿಬಿದ್ದ ಕೊರಿಯರ್ ಸಿಬ್ಬಂದಿ.

ಬೆಂಗಳೂರು: ಪ್ರ್ಯಾಂಕ್‌ ಮಾಡೋಕೆ ಜೀವಂತ ವ್ಯಕ್ತಿಯನ್ನು ಚೀಲದಲ್ಲಿ ತುಂಬಿಸಿ, ಮಂಗಳೂರಿಗೆ ಕೊರಿಯರ್ ಮೂಲಕ ಪಾರ್ಸೆಲ್ ಮಾಡಲು ಬಂದಿರುವ ಘಟನೆ ವೈಯಾಲಿಕಾವಲ್‌ನಲ್ಲಿ ನಡೆದಿದೆ.ಇಂದು (ಮಾ.17) ಸಂಜೆ 4:30ರ ಸುಮಾರಿಗೆ ಬಿಳಿಬಣ್ಣದ ಮೂಟೆಯೊಂದಿಗೆ ನಾಲ್ವರು ವೈಯಾಲಿಕಾವಲ್‌ನಲ್ಲಿರುವ ಕೊರಿಯರ್

ದೇಶ - ವಿದೇಶ

ನಂಬಲುಸಾಧ್ಯ! ಇರುವೆಗಳಿಗೆ ಭಯಪಟ್ಟು ಆತ್ಮಹತ್ಯೆ ಮಾಡಿದ ಮಹಿಳೆ.

ಹೈದರಾಬಾದ್: ಸಾಮಾನ್ಯವಾಗಿ ಹಾವು, ಜಿರಲೆ, ಇಲಿ, ಚೇಳುಗಳನ್ನು ಕಂಡರೆ ಹೆಣ್ಣುಮಕ್ಕಳು ಹೆದರುವುದು ಸಹಜ ಆದರೆ ಆತ್ಮಹತ್ಯೆ(Suicide) ಮಾಡಿಕೊಳ್ಳುವ ಹಂತಕ್ಕೆ ಹೋಗುತ್ತಾರೆಂದರೆ ನಂಬಲಸಾಧ್ಯ. ಮಹಿಳೆಯೊಬ್ಬರು ಇರುವೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಮಹಿಳೆಗೆ ಮೊದಲಿನಿಂದಲೂ ಇರುವೆ ಭಯ ಇತ್ತು ಎಂದು ಪೋಷಕರು ತಿಳಿಸಿದ್ದಾರೆ. ಈ ಘಟನೆ ನವೆಂಬರ್ 04ರಂದು ನಡೆದಿದೆ. ಮಹಿಳೆ 2022ರಲ್ಲಿ ವಿವಾಹವಾಗಿದ್ದರು. ಮೂರು ಮಕ್ಕಳಿದ್ದಾರೆ. ಆಕೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಪೊಲೀಸರು ಹೇಳಿರುವ ಪ್ರಕಾರ, ಆಕೆಗೆ ಬಾಲ್ಯದಿಂದಲೂ ಇರುವೆಗಳ ಭಯ ಇತ್ತು. ಈ ಹಿಂದೆ ತನ್ನ ಊರು ಮಂಚೇರಿಯಲ್​ನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಘಟನೆಯ ದಿನ ತನ್ನ ಮಗಳನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಹೋಗಿದ್ದಳು. ಮನೆ ಸ್ವಚ್ಛಗೊಳಿಸಿದ ನಂತರ ಕರೆದುಕೊಂಡು ಹೋಗುವುದಾಗಿ ಹೇಳಿದ್ದಳು. ಬೆಳಗ್ಗೆ ಕೆಲಸಕ್ಕೆ ಹೋಗಿದ್ದ ಪತಿ ಸಂಜೆ ಹಿಂದಿರುಗಿದಾಗ ಬಾಗಿಲು ಒಳಗಡೆಯಿಂದ ಲಾಕ್ ಆಗಿತ್ತು. ಅಕ್ಕಪಕ್ಕದ ಮನೆಯವರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಅವರ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿದ್ದರು. ಸ್ಥಳದಲ್ಲಿ ಸಿಕ್ಕಿ ಆತ್ಮಹತ್ಯಾ ಪತ್ರದಲ್ಲಿ ಕ್ಷಮಿಸಿ ನಾನು ಈ ಇರುವೆಗಳೊಂದಿಗೆ ಬದುಕಲು ಸಾಧ್ಯವಿಲ್ಲ, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ, ಜಾಗರೂಕರಾಗಿರಿ ಎಂದು ಬರೆದಿದ್ದಳು. ಆಕೆ ಮನೆಯನ್ನು ಶುಚಿಗೊಳಿಸುವಾಗ ಇರುವೆಗಳನ್ನು ನೋಡಿರಬಹುದು ಮತ್ತು ಭಯದಿಂದ ಈ ತಪ್ಪು ನಿರ್ಧಾರ ತೆಗೆದುಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಅಮೀನ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ದೇಶ - ವಿದೇಶ

ರಸ್ತೆ ನಿರ್ಮಾಣಕ್ಕೆ ಹಾಕಿದ್ದ ಕಾಂಕ್ರೀಟ್ ಹೊತ್ತೊಯ್ದ ಗ್ರಾಮಸ್ಥರು: ಬಿಹಾರದ ಘಟನೆ ವಿಡಿಯೋ ವೈರಲ್

ಪಾಟ್ನಾ: ದೇಶದ ವಿವಿಧ ಭಾಗಗಳಲ್ಲಿ ಸರಿಯಾದ ರಸ್ತೆಗಳಿಲ್ಲದೆ ಜನ ಅವಸ್ಥೆ ಪಡುತ್ತಿದ್ದರೆ, ಇಲ್ಲೊಂದು ಗ್ರಾಮದಲ್ಲಿ ರಸ್ತೆಗೆ ಹಾಕಿದ್ದ ಕಾಂಕ್ರೀಟ್ ಅನ್ನೇ ಗ್ರಾಮಸ್ಥರು ಹೊತ್ತೊಯ್ದಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಹೌದು.. ಗ್ರಾಮಾಂತರ ಪ್ರದೇಶದಲ್ಲಿ ಇತ್ತೀಚೆಗೆ

ಅಪರಾಧ ಕರ್ನಾಟಕ

ಕಳ್ಳನಿಂದ ವಿಚಿತ್ರ ಕೃತ್ಯ: ಬೈಕ್‌ಗೆ ಮುತ್ತು ನೀಡಿ ಪೊಲೀಸರಿಗೆ ಹಿಂತಿರುಗಿಸಿದ ದರೋಡೆಕೋರ

ಕಟಕ್:ವಿಚಿತ್ರ ಘಟನೆಯೊಂದರಲ್ಲಿ ದರೋಡೆಕೋರನೊಬ್ಬ ತನ್ನ ಕದ್ದ ಬೈಕ್ ಅನ್ನು ಪೊಲೀಸರಿಗೆ ಒಪ್ಪಿಸುವ ಮೊದಲು ಮುತ್ತಿಟ್ಟಿದ್ದಾನೆ. ಈ ಘಟನೆ ಮಂಗಳಬಾಗ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕಳ್ಳರಿಗೆ ಬೈಕ್ ಕದ್ದಿದ್ದಕ್ಕೆ ಯಾವುದೇ ನಾಚಿಕೆ ಅಥವಾ ಅಪರಾಧ ಭಾವನೆ

ಅಪರಾಧ ಕರ್ನಾಟಕ

ಹೆಂಡತಿಯ ಕಿರುಕುಳಕ್ಕೆ ಗಂಡನ ಕಣ್ಣೀರು: ಹುಬ್ಬಳ್ಳಿಯಲ್ಲೊಂದು ವಿಚಿತ್ರ ಪ್ರಕರಣ

ಹುಬ್ಬಳ್ಳಿ: ಗಂಡ-ಹೆಂಡತಿಯ ನಡುವಿನ ಜಗಳಗಳು ಪೊಲೀಸ್ ಠಾಣೆಯ ಮೆಟ್ಟಿಲೇರಿ, ದೂರು-ದಾಖಲೆಯಾಗುವುದು ಸಾಮಾನ್ಯ. ಸಾಮಾನ್ಯವಾಗಿ, ಗಂಡ ಕುಡಿದು ಬಂದು ಹಿಂಸೆ ನೀಡುತ್ತಾನೆ ಎಂದು ಪತ್ನಿಯರು ಪೊಲೀಸರ ಮುಂದೆ ಕಣ್ಣೀರು ಹಾಕುವ ದೃಶ್ಯವನ್ನು ನಾವು ಕಂಡಿದ್ದೇವೆ. ಆದರೆ,

ಕರ್ನಾಟಕ

ಶೂ ರ‍್ಯಾಕ್ ತೆಗೆದಿಲ್ಲವೆಂದು 24 ಸಾವಿರ ದಂಡ! ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ವಿಚಿತ್ರ ಘಟನೆ

ಬೆಂಗಳೂರು : ಅಪಾರ್ಟ್‌ಮೆಂಟ್ ಹೊರಗೆ ಇಟ್ಟಿದ್ದ ಶೂ ರ‍್ಯಾಕ್ ತೆಗೆಯಲು ನಿರಾಕರಿಸಿದ್ದಕ್ಕಾಗಿ ಅಲ್ಲಿನ ನಿವಾಸಿಗೆ ಕ್ಷೇಮಾಭಿವೃದ್ಧಿ ಸಂಘವು 24,000 ರೂ ದಂಡವನ್ನು ವಿಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಒಂದನೇ ಹಂತದ ಪ್ರೆಸ್ಟೀಜ್‌

ದೇಶ - ವಿದೇಶ

11 ವರ್ಷದ ಬಾಲಕನ ಹೊಟ್ಟೆಯಲ್ಲಿ ಸಿಕ್ಕಿತು ಚಿನ್ನ

ಚೀನಾ : ಮಕ್ಕಳ ವಿಷಯದಲ್ಲಿ ಹೆತ್ತವರು ಎಷ್ಟು ಜಾಗರೂಕರಾಗಿದ್ದರೂ ಸಾಲುವುದಿಲ್ಲ. ಸಣ್ಣ ಮಕ್ಕಳು ನಾಣ್ಯ, ಬಾಟಲಿ ಮುಚ್ಚಳ ನುಂಗಿರುವ ಘಟನೆಗಳ ಬಗ್ಗೆ ಕೇಳಿರುತ್ತೇವೆ. ಇದೀಗ ಹನ್ನೊಂದು ವರ್ಷದ ಬಾಲಕನೊಬ್ಬನು ಚಿನ್ನದ ಗಟ್ಟಿ ನುಂಗಿದ್ದು, ಶಸ್ತ್ರಚಿಕಿತ್ಸೆ