Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಕ್ರಮ ಮದ್ಯ ಮಾರಾಟಗಾರರಿಗೆ ತಹಶೀಲ್ದಾರ್ ಶಾಕ್: 13 ಮನೆಗಳಿಗೆ ನೀರು ಪೂರೈಕೆ ಸ್ಥಗಿತ!

Spread the love

ಕೂಡ್ಲಿಗಿ(ವಿಜಯನಗರ): ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 13 ಮನೆಗಳಿಗೆ ತಹಶೀಲ್ದಾರ್ ತಾತ್ಕಾಲಿಕವಾಗಿ ನೀರು ಪೂರೈಕೆ ತಗಿತಗೊಳಿಸಿದ್ದಾರೆ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗೆದ್ದಲಗಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ತಹಶೀಲ್ದಾರ್ ಕ್ರಮಕ್ಕೆ ಜನರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಅಕ್ರಮ ಮದ್ಯ ಮಾರಾಟಗಾರರು ತಹಶೀಲ್ದಾರರ ಕ್ರಮಕ್ಕೆ ಬೆಚ್ಚಿಬಿದ್ದಿದ್ದಾರೆ.

ಕೂಡ್ಲಿಗಿ ತಾಲೂಕಿನ ಗೆದ್ದಲಗಟ್ಟೆ ಗ್ರಾಮದಲ್ಲಿ 10ಕ್ಕೂ ಹೆಚ್ಚು ಮಂದಿ ಆಕ್ರಮವಾಗಿ ಮದ್ಯ ಮಾರಾಟದಲ್ಲಿ ತೊಡಗಿದ್ದಾರೆ. ಇದರಿಂದಾಗಿ ಅಪ್ರಾಪ್ತರು ಕುಡಿತದ ಚಟಕ್ಕೆ ದಾಸರಾಗುತ್ತಿದ್ದಾರೆ ಎಂದು ಗ್ರಾಮದ 30ಕ್ಕೂ ಅಧಿಕ ಮಹಿಳೆಯರು ಕೂಡ್ಲಿಗಿ ತಹಶೀಲ್ದಾರ್, ಡಿವೈಎಸ್ಪಿ ಮತ್ತು ಅಬಕಾರಿ ನಿರೀಕ್ಷಕರಿಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 13 ಮನೆಗಳಿಗೆ ತಾತ್ಕಾಲಿಕವಾಗಿ ನೀರು ಸರಬರಾಜು ಬಂದ್ ಮಾಡಿಸಿದ್ದಾರೆ


Spread the love
Share:

administrator

Leave a Reply

Your email address will not be published. Required fields are marked *