Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಟಾರ್ಗೆಟ್ ಫಿಕ್ಸ್ ಮಾಡಿ ಕೊಂದೇ ಬಿಟ್ರು ! ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸ್ಫೋಟಕ ಮಾಹಿತಿ ರಿವೀಲ್​

Spread the love

ಮಂಗಳೂರು : ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಹಿಂದೂ ಕಾರ್ಯಕರ್ತನ ಹತ್ಯೆಗೆ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ. ಸೇಡಿಗೆ ಸೇಡು ಎನ್ನುವಂತೆ ನಡು ರಸ್ತೆಯಲ್ಲೇ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಗೈದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ತನಿಖೆ ವೇಳೆ ಕೊಲೆ ಕೇಸ್​ಗೆ ಸಂಬಂಧಿಸಿದ ಸ್ಫೋಟಕ ವಿಚಾರಗಳು ಬಯಲಾಗಿದೆ. ದುಷ್ಕರ್ಮಿಗಳು ಸೋಶಿಯಲ್ ಮೀಡಿಯಾದಲ್ಲೇ ಕೊಟ್ಟಿದ್ರು ರಿವೇಂಜ್ ವಾರ್ನಿಂಗ್​.

ಮಾರ್ಚ್​​ನಲ್ಲೇ ಕೊಲೆಗೆ ಸ್ಕೆಚ್​!

ಮಾರ್ಚ್ 31, 2025ರಂದು ಸುಹಾಸ್ ಶೆಟ್ಟಿ ಹತ್ಯೆಗೆ ಸ್ಕೆಚ್ ಹಾಕಿದ್ರು ಎನ್ನಲಾಗ್ತಿದೆ. ಮಾರ್ಚ್ ಅಂತ್ಯದಲ್ಲೇ ಸುಹಾಸ್ ಶೆಟ್ಟಿಯ ತಲೆ ಉರುಳಿಸಲು ಹಂತಕರು ಪ್ಲಾನ್ ಮಾಡಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಹಂತಕರು ಸುಹಾಸ್​ ಫೋಟೋ ಸಹಿತ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ ಹಾಗಿ ಟಾರ್ಗೆಟ್ ಫಿಕ್ಸ್ ಮಾಡಿದ್ದರು. ಟಾರ್ಗೆಟ್ ಫಿಕ್ಸ್ ಮಾಡಿ ಸ್ವತಃ ಸುಹಾಸಿಗೆ ಟ್ಯಾಗ್ ಮಾಡಿದ್ದರು. ಆ ಟ್ಯಾಗ್ ಮಾಡಿದ ವಿಡಿಯೋ ಸುಹಾಸ್ ಶೆಟ್ಟಿ ಡೌನ್ ಲೋಡ್ ಮಾಡಿಕೊಂಡಿದ್ದ ಎನ್ನಲಾಗ್ತಿದೆ.

ಟಾರ್ಗೆಟ್ ಕಿಲ್ಲರ್ ಹೆಸರಿನ ಇನ್ಸ್ಟಾಗ್ರಾಂ ಪೇಜ್​​ ಕೂಡ ಕ್ರಿಯೇಟ್ ಮಾಡಿದ್ದ ದುಷ್ಕರ್ಮಿಗಳು, ಸುಹಾಸಿಗೆ ಟಾರ್ಗೆಟ್ ಫಿಕ್ಸ್ ಮಾಡಿರೋದಾಗಿಯೂ ಹೇಳಿದ್ರು. ಫಾಜೀಲಿನ ಫೋಟೋ ಜೊತೆಗೆ ಸುಹಾಸಿನ ಫೋಟೋ ಹಾಕಿ ಟಾರ್ಗೆಟ್ ದಿನಾಂಕ ನಿಗದಿ ಮಾಡಿದ್ದರು. “ರಿವೇಂಜ್ ಸೂನ್” ಎಂದು ಸುಹಾಸಿನ ಫೋಟೋ ಹಾಕಿ ಪೋಸ್ಟ್ ಮಾಡಿದ್ದರು. ಮಂಗಳೂರಿನಲ್ಲಿ ನಡೆದ ಬಶೀರ್ ಹತ್ಯೆ ಆರೋಪಿಯ ರಿವೇಂಜ್ ಬಗ್ಗೆಯೂ ಪೋಸ್ಟ್ ಮಾಡಿದ್ದರು.

”ರಿವೇಂಜ್ ಸೂನ್” ಎಂದು ಪೋಸ್ಟ್

2018ರ ಜನವರಿ 3ರಂದು ನಡೆದಿದ್ದ ಬಶೀರ್ ಹತ್ಯೆ ಪ್ರಕರಣದಲ್ಲಿ ಬಶೀರ್ ಹತ್ಯೆ ಆರೋಪಿ ಶ್ರೀಜಿತ್ ಫೋಟೋ ಕೂಡ ಬಳಸಿ “ರಿವೇಂಜ್ ಸೂನ್” ಎಂದು ಪೋಸ್ಟ್ ಮಾಡಿದ್ದರು. ಹಾಗೆಯೇ, 2022ರ ಜುಲೈ 28ರಂದು ನಡೆದ ಸುರತ್ಕಲ್ ನ ಫಾಜಿಲ್ ಹತ್ಯೆಗೆ ಪ್ರತೀಕಾರವಾಗಿ ಹಂತಕರು ಸುಹಾಸಿನ ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿಲ್ಲ.

ಅಲ್ಲಿ “Revenge Soon” ಎಂಬ ಸಂದೇಶ ಹಂಚಲಾಗಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ರೀತಿ ಓಪನ್ ಆಗಿ ಬೆದರಿಕೆ ಸಂದೇಶ ಹರಿದಾಡುತ್ತಿದ್ದರೂ, ನಮ್ಮ ಪೊಲೀಸ್ ಇಲಾಖೆ ಈ ಬಗ್ಗೆ ಮುಂಚಿತವಾಗಿ ಸೂಕ್ತ ಕ್ರಮ ಕೈಗೊಳ್ಳದಿರುವುದರ ಮೇಲೆ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *