Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅನ್ಯಾಯಪೂರ್ಣ ಪ್ರೇಮದ ಕ್ರೂರ ಅಂತ್ಯ: ಹುಟ್ಟಿದ ಮಗುವನ್ನೇ ಹತ್ಯೆ

Spread the love

ಬೆಳಗಾವಿ : ಮದುವೆಗೆ ಮುನ್ನ ಹುಟ್ಟಿದ ಮಗುವನ್ನು ಕೊಂದ ಪ್ರೇಮಿಗಳ ವಿರುದ್ದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ಅವರನ್ನು ಅರೆಸ್ಟ್ ಮಾಡಿದ ಘಟನೆ ಬೆಳಗಾವಿಯ ಅಂಬಡಗಟ್ಟಿ ಗ್ರಾಮದಲ್ಲಿ ನಡೆದಿದೆ.
ಬಂಧಿತರನ್ನು ಅಂಬಡಗಟ್ಟಿಯ ಮಹಾಬಲೇಶ್ವರ ರುದ್ರಪ್ಪ ಕಾಮೋಜಿ (31) ಹಾಗೂ ಸಿಮ್ರನ್ ಮೌಲಾಸಾಬ್ ಮಾಣಿಕಬಾಯಿ (22) ಎಂದು ಗುರುತಿಸಲಾಗಿದೆ. ಮಾರ್ಚ್ 5ರಂದು ಅಂಬಡಗಟ್ಟಿಯ ಮನೆಯೊಂದರ ಹಿತ್ತಲಿನ ತಿಪ್ಪೆಗುಂಡಿಯಲ್ಲಿ ಹಸುಳೆ ಶವ ಪತ್ತೆಯಾಗಿತ್ತು. ಹಸುಳೆ ತಲೆಗೆ ಪೆಟ್ಟು ಬಿದ್ದಿದ್ದರಿಂದ ಅನುಮಾನಗೊಂಡ ಪೊಲೀಸರು ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಹಾಬಲೇಶ್ವರ ಹಾಗೂ ಸಿಮ್ರನ್ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ದೈಹಿಕ ಸಂಪರ್ಕದಿಂದ ಸಿಮ್ರನ್ ಗರ್ಭಿಣಿಯಾಗಿದ್ದರು. ಆದರೆ, ಇಬ್ಬರೂ ಮನೆಯಲ್ಲಿ ಈ ವಿಷಯ ಮುಚ್ಚಿಟ್ಟಿದ್ದರು. ಸಿಮ್ರನ್ ದೈಹಿಕವಾಗಿ ದುಂಡಗಿದ್ದ ಕಾರಣ ಗರ್ಭಿಯಾದ ವಿಷಯ ಮನೆಯಲ್ಲಿ ಗೊತ್ತಾಗಿರಲಿಲ್ಲ. 9 ತಿಂಗಳ ಬಳಿಕ ಮಾರ್ಚ್ 5ರಂದು ಹೆರಿಗೆ ನೋವು ಕಾಣಿಸಿಕೊಂಡಿತ್ತು. ಬಾತ್‌ರೂಮ್‌ನಲ್ಲಿ ಹೋಗಿ ಸಿಮ್ರನ್ ‘ಸ್ವಯಂ ಹೆರಿಗೆ’ ಮಾಡಿಕೊಂಡು ಹೆಣ್ಣುಮಗುವಿಗೆ ಜನ್ಮ ನೀಡಿದ್ದರು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.

ಹೆರಿಗೆ ಹೇಗೆ ಮಾಡಿಕೊಳ್ಳಬೇಕು ಎಂಬುದನ್ನು ಸಿಮ್ರನ್‌ ಯುಟೂಬ್‌ನಲ್ಲಿ ನೋಡಿಕೊಂಡಿದ್ದರು. ಹೆರಿಗೆ ಸಂದರ್ಭದಲ್ಲಿ ಪ್ರಿಯಕರ ಮಹಾಬಲೇಶ್ವರ ಕೂಡ ವಿಡಿಯೊ ಕಾಲ್‌ನಲ್ಲಿ ಮಾರ್ಗದರ್ಶನ ಮಾಡಿದ್ದ. ಹೆರಿಗೆಯಾದ ಬಳಿಕ ಸಿಮ್ರನ್ ಮಗು ಅಳದಂತೆ ಬಾಯಿಗೆ ಬಟ್ಟೆ ಕಟ್ಟಿ, ಪೆಟ್ಟಿಗೆಯಲ್ಲಿ ತುಂಬಿದ್ದರು. ಆಗ ಮಗುವಿನ ತಲೆಗೆ ಪೆಟ್ಟಾಗಿರಬಹುದು. ನಂತರ ಅದನ್ನು ತಿಪ್ಪೆಗುಂಡಿಯಲ್ಲಿ ಬಿಸಾಕಿ ಬಂದಿದ್ದರು. ಹಸುಳೆ ಶವವನ್ನು ನಾಯಿಗಳು ಎಳೆದಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ’ ಎಂದರು. ಪೊಲೀಸರು ಸಾಕಷ್ಟು ತನಿಖೆ ಮಾಡಿ ಪ್ರಕರಣ ಭೇದಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದೂ ಹೇಳಿದರು.


Spread the love
Share:

administrator

Leave a Reply

Your email address will not be published. Required fields are marked *