Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

‘ದಿ ಕೇರಳ ಸ್ಟೋರಿ’ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ: ಕೋಮುವಾದ ಪ್ರಚೋದಿಸುವ ಸಿನಿಮಾ ಎಂದು ಸಿಎಂ ಪಿಣರಾಯಿ ವಿಜಯನ್ ಕಿಡಿ

Spread the love

ತಿರುವನಂತಪುರ: 2023ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಶುಕ್ರವಾರ ಘೋಷಣೆಯಾಗಿವೆ. ವಿವಾದಾತ್ಮಕ ಸಿನಿಮಾ ‘ದಿ ಕೇರಳ ಸ್ಟೋರಿ’ಯ ಸುದಿಪ್ತೋ ಸೇನ್‌ ಅವರಿಗೆ ‘ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ’ ನೀಡಿರುವುದಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಕಿಡಿಕಾರಿದ್ದಾರೆ.

ಕೋಮುವಾದವನ್ನು ಪ್ರಚೋದಿಸಲು ಹಾಗೂ ಕೇರಳಕ್ಕೆ ಅವಹೇಳನ ಮಾಡಲು ಪ್ರಯತ್ನಿಸಿದ ಸಿನಿಮಾವನ್ನು ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ, ರಾಷ್ಟ್ರೀಯ ಸಮಗ್ರತೆ ಮತ್ತು ಕೋಮು ಸಾಮರಸ್ಯಕ್ಕೆ ಹೆಸರಾದ ಭಾರತೀಯ ಸಿನಿಮಾ ರಂಗವನ್ನು ತೀರ್ಪುಗಾರರು ಅವಮಾನಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕೋಮುವಾದವನ್ನು ಹರಡಲೆತ್ನಿಸುವ ಕಾರ್ಯಸೂಚಿಗೆ ಕಲೆಯನ್ನು ಬಳಸುವುದರ ವಿರುದ್ಧ ಬಲವಾದ ಪ್ರತಿಭಟನೆಗೆ ಅವರು ಕರೆ ನೀಡಿದ್ದಾರೆ.

‘ದಿ ಕೇರಳ ಸ್ಟೋರಿ’ ಸಿನಿಮಾ 2023ರಲ್ಲಿ ತೆರೆಕಂಡಿತ್ತು. ರಾಜ್ಯದ ಸುಮಾರು 32,000 ಮಹಿಳೆಯರನ್ನು ಮತಾಂತರಗೊಳಿಸಿ, ಭಯೋತ್ಪಾದನಾ ಸಂಘಟನೆಗೆ ಸೇರಿಸಲಾಗಿದೆ ಎಂದು ಅದರ ಟೀಸರ್‌ನಲ್ಲಿ ಉಲ್ಲೇಖಿಸಲಾಗಿತ್ತು. ಅದಾದ ನಂತರ ಕೇರಳದಾದ್ಯಂತ ಭಾರಿ ಪ್ರತಿಭಟನೆಗಳು ನಡೆದಿದ್ದವು.


Spread the love
Share:

administrator

Leave a Reply

Your email address will not be published. Required fields are marked *