Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಗೋಧಿ ಹಿಟ್ಟಿನಲ್ಲಿ ವಿಷ ಬೆರೆಸಿದ ಸಂಚು ಭರ್ಜರಿಯಾಗಿ ಫೈಲ್

Spread the love

ಕೌಶಾಂಬಿ: ಮಹಿಳೆಯೊಬ್ಬಳು ತನ್ನದೇ ಕುಟುಂಬದ 8 ಸದಸ್ಯರನ್ನು ಕೊಲ್ಲಲು ಗೋಧಿ ಹಿಟ್ಟಿನಲ್ಲಿ ವಿಷ ಬೆರೆಸಿದ್ದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ಘಟನೆ ನಡೆದಿದೆ. ಮಹಿಳೆ ಎಲ್ಲರನ್ನೂ ಕೊಲ್ಲುವ ಉದ್ದೇಶದಿಂದ ತಂದೆ ಜತೆಗೆ ಸೇರಿ ಈ ಕೃತ್ಯವೆಸಗಿದ್ದಳು. ಗೋಧಿ ಹಿಟ್ಟಿಗೆ ಸಲ್ಫೋಸ್ ಬೆರೆಸಿದ್ದಳು.

ಈ ಸಂಚು ಸಕಾಲದಲ್ಲಿ ಬಯಲಾಗಿದ್ದು, ಎಲ್ಲರ ಜೀವ ಉಳಿದಿವೆ, ಮಹಿಳೆ ಮತ್ತೆ ಆಕೆಯ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಲಕಿಯಾ ಬಾಜಾ ಖುರ್ರಂ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬ್ರಿಜೇಶ್ ಕುಮಾರ್ ಅವರ ಪತ್ನಿ ಮಾಲತಿದೇವಿ ನಿರಂತರ ನಡೆಯುತ್ತಿದ್ದ ಕೌಟುಂಬಿಕ ಕಲಹದಿಂದಾಗಿ ತನ್ನ ತಂದೆ ಜತೆ ಸೇರಿ ಯೋಜನೆ ರೂಪಿಸಿದ್ದಳು.

ಮಾಲತಿ ತನ್ನ ಅತ್ತಿಗೆ ಮಂಜು ದೇವಿ ಜತೆಗೆ ದೀರ್ಘಕಾಲದಿಂದ ನಡೆಯುತ್ತಿದ್ದ ಜಗಳದಿಂದ ಅಸಮಾಧಾನಗೊಂಡು ಇಡೀ ಕುಟುಂಬವನ್ನೇ ನಿರ್ಮೂಲನೆ ಮಾಡಲು ಮುಂದಾಗಿದ್ದಳು. ಮಂಜು ದೇವಿ ಆಹಾರ ಸಿದ್ಧಪಡಿಸಲು ಹೋದಾಗ ಗೋಧಿ ಹಿಟ್ಟಿನಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದಾಗ ಮಾಲತಿಯಯ ಉದ್ದೇಶ ಏನಿರಬಹುದು ಎಂಬುದು ತಿಳಿಯಿತು. ಕೂಡಲೇ ಕುಟುಂಬದ ಎಲ್ಲಾ ಸದಸ್ಯರಿಗೂ ಮಾಹಿತಿ ನೀಡಲಾಗಿತ್ತು. ವಿಚಾರಣೆ ಸಮಯದಲ್ಲಿ ಆಕೆ ಸಲ್ಫೋಸ್ ಮಿಶ್ರಣ ಮಾಡಿರುವುದು ಹೌದೆಂದು ಒಪ್ಪಿಕೊಂಡಿದ್ದಾಳೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದರು. ಮಾಲತಿ ದೇವಿ ಮತ್ತು ಆಕೆಯ ತಂದೆಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *