Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಾಳೆಯಿಂದ (ಮೇ 22) ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ಬಂದ್!

Spread the love

ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು ಆನೆಗಳ ನಡುವಿನ ಕಾದಾಟದ ಸಂದರ್ಭದಲ್ಲಿ ಪ್ರವಾಸಿ ಮಹಿಳೆಯೊಬ್ಬರು ಸಿಕ್ಕಿಹಾಕಿಕೊಂಡು ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ಪ್ರವಾಸಿಗ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ನಾಳೆ (ಮೇ 22)ಯಿಂದ ತಾತ್ಕಾಲಿಕವಾಗಿ ಪ್ರವೇಶವನ್ನು ನಿಷೇಧಿಸಲು ಅರಣ್ಯ ಇಲಾಖೆ ಮುಂದಾಗಿದೆ.
ಕೆಲ ದಿನಗಳ ಹಿಂದೆ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ಆನೆಗಳ ನಡುವಿನ ಗುದ್ದಾಟದ ಸಂದರ್ಭದಲ್ಲಿ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಜುನೆಸ್ಸಿ(33) ಎಂಬವವರು ಮೃತಪಟ್ಟಿದ್ದರು. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ಆನೆ ಬಿಡಾರಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣವಾಗಿರುವ ಸಕ್ರೆಬೈಲು ಆನೆ ಬಿಡಾರಕ್ಕೆ ರಾಜ್ಯ ಹಾಗೂ ಹೊರ ರಾಜ್ಯದ ವಿವಿಧೆಡೆಯಿಂದ ಆನೆಗಳನ್ನು ನೋಡಲು ಅಪಾರ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಾರೆ. ಬಂದಂತಹ ಪ್ರವಾಸಿಗರು ಆನೆಗಳಿಗೆ ಸ್ನಾನ ಮಾಡಿಸುವುದು ಮತ್ತು ಅವುಗಳನ್ನು ಮುಟ್ಟುವುದು ಮಾಡುತ್ತಾರೆ. ದುಬಾರೆ ಆನೆ ಬಿಡಾರದ ದುರಂತದ ನಂತರ ಆನೆಗಳಿಗೆ ಸ್ನಾನ ಮಾಡಿಸುವ ವ್ಯವಸ್ಥೆ ಬಂದ್ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ದುಬಾರೆಯಲ್ಲಿ ನಡೆದ ಘಟನೆ ಸಕ್ರೆಬೈಲು ಆನೆ ಬಿಡಾರದಲ್ಲಿ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಮಹತ್ವದ ನಿರ್ಧಾರವನ್ನು ಅರಣ್ಯ ಇಲಾಖೆ ಕೈಗೊಂಡಿದೆ.
ಸಕ್ರೆಬೈಲು ಆನೆ ಬಿಡಾರವು ಇಂದಿನಿಂದಲೇ ಮುಚ್ಚಬೇಕಿತ್ತು. ಆದರೆ ಇಂದು ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದರಿಂದ ಅವರಿಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ ನಾಳೆಯಿಂದ ಕೆಲ ದಿನಗಳ ಕಾಲ ತಾತ್ಕಾಲಿಕವಾಗಿ ಬಂದ್ ಆಗಿರಲಿದೆ.
ಸದ್ಯ ಸಕ್ರೆಬೈಲು ಆನೆ ಬಿಡಾರದಲ್ಲಿ 24 ಆನೆಗಳು ಇವೆ. 19 ಗಂಡು ಆನೆಗಳು ಐದು ಹೆಣ್ಣು ಆನೆಗಳು ಇವೆ. ಆನೆಗಳಿಗೆ ಸ್ನಾನ ಮಾಡಿಸುವ ಜಾಗದಿಂದ 50 ಮೀಟರ್ ದೂರದಲ್ಲಿ ಆನೆಗಳನ್ನು ವೀಕ್ಷಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *