Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕರ್ನಾಟಕದಲ್ಲಿ ಟ್ರಾಫಿಕ್ ದಂಡ ರಿಯಾಯಿತಿ ವಿವಾದ-ತಜ್ಞರಿಂದ ಅಪಾಯದ ಎಚ್ಚರಿಕೆ

Spread the love

ಬೆಂಗಳೂರು: ಟ್ರಾಫಿಕ್‌ ದಂಡದ ಮೊತ್ತವನ್ನು ಪಾವತಿಸುವ ಮುನ್ನ ಎಚ್ಚರವಾಗಿರಿ. ಸೈಬರ್‌ ಕಳ್ಳರು (Cyber ​​Thieves) ಯಾವುದೋ ಲಿಂಕ್‌ ಕಳುಹಿಸಿ ನಿಮ್ಮ ಹಣಕ್ಕೆ ಕನ್ನ ಹಾಕಲು ಮುಂದಾಗಿದ್ದು, ಟೆಕ್ಕಿಯೊಬ್ಬರು 2.65 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಹೌದು. ಸಂಚಾರ ಪೊಲೀಸರು 50% ರಿಯಾಯಿತಿ ನೀಡಿ ದಂಡ ಕಟ್ಟಲು ಅವಕಾಶ ನೀಡಿದ್ದಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಸೈಬರ್ ವಂಚಕರು ವಾಹನ ಸವಾರರ ಮೊಬೈಲ್ ನಂಬರ್‌ಗಳಿಗೆ ಕೆಲ ಲಿಂಕ್‌ಗಳು, ಎಪಿಕೆ ಫೈಲ್‌ಗಳನ್ನು ಕಳುಹಿಸಿ ವಾಹನಗಳ ದಂಡವನ್ನು ಚೆಕ್‌ ಮಾಡಿಕೊಳ್ಳಿ. ಹಾಗೆಯೇ ಇಲ್ಲೇ ದಂಡ ಕಟ್ಟಬಹುದು ಎಂಬ ಮೆಸೇಜ್‌ಗಳನ್ನು ಕಳುಹಿಸುತ್ತಿದ್ದಾರೆ.

ವಂಚಕರ ಮೆಸೇಜ್‌ಗಳನ್ನು ನಂಬಿದ ಹಲವರು ಅದನ್ನು ಓಪನ್ ಮಾಡಿದ ತಕ್ಷಣ ಅಕೌಂಟ್ ನಲ್ಲಿದ್ದ ಹಣ ಮಾಯವಾಗುತ್ತದೆ. ಕೊಡಿಗೇಹಳ್ಳಿ ವ್ಯಾಪ್ತಿಯ ಟೆಕ್ಕಿಯೊಬ್ಬರಿಗೆ ಸೈಬರ್ ವಂಚಕರು ಓಪನ್ ಮಾಡಿ ನಿಮ್ ವಾಹನದ ಫೈನ್ ಎಷ್ಟಿದೆ ಚೆಕ್ ಮಾಡಿಕೊಳ್ಳಿ ಅಂತಾ ಎಪಿಕೆ ಫೈಲ್‌ ಕಳುಹಿಸಿದ್ದರು.

ಆ ಮಸೇಜ್ ನಂಬಿದ ಟೆಕ್ಕಿ ಆ ಲಿಂಕ್ ನ ಓಪನ್ ಮಾಡಿದ ಕೆಲವೇ ನಿಮಿಷಗಳಲ್ಲಿ ಖಾತೆಯಲ್ಲಿದ್ದ 2.65 ಲಕ್ಷ ರೂ. ಹಣವನ್ನು ಸೈಬರ್ ವಂಚಕರು ಎಗರಿಸಿದ್ದಾರೆ. ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಮುರಳಿ ದೂರು ನೀಡಿದ್ದಾರೆ.

ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ಆ.23ರಿಂದ ಸೆ.12ರವರೆಗೂ ದಂಡದ ಕೇವಲ ಶೇ.50ರಷ್ಟನ್ನು ಪಾವತಿಸಬಹುದು.

ಹಲವು ವರ್ಷಗಳಿಂದ ಟ್ರಾಫಿಕ್ ದಂಡ ಕಟ್ಟದೇ ಹಾಗೇ ಉಳಿಸಿಕೊಂಡವರಿಗೆ ಈ ರಿಯಾಯಿತಿ ನೀಡಲಾಗಿದೆ. ಇದಕ್ಕೂ ಮುನ್ನ ರಾಜ್ಯ ಸರ್ಕಾರ ಇದೇ ರೀತಿ ರಿಯಾಯಿತಿ ಘೋಷಿಸಿ ಮೊತ್ತದ ದಂಡ ಸಂಗ್ರಹಿಸಿತ್ತು. ಈ ಆದೇಶದಂತೆ ಕೇವಲ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಮಾತ್ರ ದಂಡ ಪಾವತಿಸಲು ಅವಕಾಶವಿರುತ್ತದೆ.


Spread the love
Share:

administrator

Leave a Reply

Your email address will not be published. Required fields are marked *