Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವರ್ಗಾವಣೆ ಭೀತಿ: ಮುಖ್ಯಶಿಕ್ಷಕ ಕುಬೇರ ಆತ್ಮಹತ್ಯೆ, ಹಳ್ಳಿಹೊಳೆ ಶಾಲೆಯಲ್ಲಿ ದುರಂತ!

Spread the love

ಶಂಕರನಾರಾಯಣ: ವರ್ಗಾವಣೆ ಭಯದಲ್ಲಿ ಹಳ್ಳಿಹೊಳೆಯ ಸುಳುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕುಬೇರ(49) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಶೀಲೆ ಪಾರೆ ಎಂಬಲ್ಲಿ ಜು.7ರಂದು ಬೆಳಗ್ಗೆ ನಡೆದಿದೆ.

ಇವರು ತನ್ನ ಪತ್ನಿ ಸುಮಿತಾ ಬಳಿ ಸರಕಾರಿ ಶಾಲೆಯ ನಿಯಮದ ಪ್ರಕಾರ ಒಂದು ಶಾಲೆಯಲ್ಲಿ 60 ವಿದ್ಯಾರ್ಥಿಗಳಿಗಿಂತ ಕಡಿಮೆ ವಿದ್ಯಾರ್ಥಿಗಳಿದ್ದಲ್ಲಿ ಆ ಶಾಲೆಯ ಮುಖ್ಯ ಶಿಕ್ಷಕರನ್ನು ವರ್ಗಾವಣೆಗೊಳಿಸುವು ದಾಗಿ ಹೇಳಿದ್ದರು
ಕುಬೇರ ಕೆಲಸ ಮಾಡುವ ಶಾಲೆಯಲ್ಲಿ 53 ವಿದ್ಯಾರ್ಥಿಗಳಿರುವುದರಿಂದ ಕುಬೇರ ಕಳೆದ 1 ತಿಂಗಳಿನಿಂದ ತನಗೆ ಆ ಶಾಲೆಯಿಂದ ವರ್ಗಾವಣೆಯಾಗುವುದಾಗಿ ಭಾವಿಸಿ ಚಿಂತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಜು.7ರಂದು ಅವರು ಶಾಲೆಗೆ ಹೋಗಿದ್ದು ಬೆಳಗ್ಗೆ ಅವರು ಕಮಲಶೀಲೆ ಪಾರೆ ಎಂಬಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ತಾನು ಕೆಲಸ ಮಾಡುವ ಶಾಲೆಯಿಂದ ಬೇರೆ ಕಡೆಗೆ ವರ್ಗಾವಣೆಯಾಗುವ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪತ್ನಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.


Spread the love
Share:

administrator

Leave a Reply

Your email address will not be published. Required fields are marked *