Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ತುಘಲಕ್ ದರ್ಬಾರ್: ಗ್ಯಾರಂಟಿ ಯೋಜನೆಗಳ ವಿರುದ್ಧ ಯಡಿಯೂರಪ್ಪನವರ ಆಕ್ರೋಶ

Spread the love

ಬೆಂಗಳೂರು: ಗ್ಯಾರಂಟಿ ಯೋಜನೆಗಳು ನಿಷ್ಪರಿಣಾಮಕಾರಿ ಮತ್ತು ಅರ್ಥಹೀನ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತುಘಲಕ್ ದರ್ಬಾರ್‌ ನಡೆದಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಅರ್ಥವಿಲ್ಲ. ಜನರನ್ನು ತೃಪ್ತಿಪಡಿಸಲು ಜಾರಿಗೆ ತಂದ ಯಾವ ಯೋಜನೆಗಳೂ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮತದಾರರನ್ನು ಆಕರ್ಷಿಸಲು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ, ಇದರಿಂದ ಯಾವುದೇ ಪ್ರಯೋಜನಗಳಾಗಿಲ್ಲ ಎಂದು ಹೇಳಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಅಲ್ಪಸಂಖ್ಯಾತರಿಗೆ ಶೇಕಡಾ 4 ರಷ್ಟು ಮೀಸಲಾತಿ ನೀಡುವ ಸರ್ಕಾರದ ನಿರ್ಧಾರವು ಅನ್ಯಾಯುತವಾದದ್ದು ಎಂದು ಆರೋಪಿಸಿದರು.

ರಾಜ್ಯದಲ್ಲಿ ಬಿಜೆಪಿ ಪರ ಅಲೆ ಹೆಚ್ಚುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಗುರಿ ಸಾಧಿಸಲು ಪಕ್ಷವು ಪ್ರಾಮಾಣಿಕ ಮತ್ತು ಒಗ್ಗಟ್ಟಿನ ಪ್ರಯತ್ನಗಳನ್ನು ಮಾಡುತ್ತದೆ ಎಂದು ತಿಳಿಸಿದರು.


Spread the love
Share:

administrator

Leave a Reply

Your email address will not be published. Required fields are marked *