Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಉಡುಪಿ: ಜಿಲ್ಲೆಯಲ್ಲಿ ರೆಡ್ ಅಲರ್ಟ್; ಶಾಲೆ, ಅಂಗನವಾಡಿಗಳಿಗೆ ರಜೆ, ಕಾಲೇಜುಗಳಿಗೆ ಸೂಚನೆ

Spread the love

Views and Posts on Various Aspects: School days: Memories of Rain

ಉಡುಪಿ: ಜಿಲ್ಲೆಯಲ್ಲಿ ಹವಮಾನ ಇಲಾಖೆ ಗುರುವಾರ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಇಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಇಲ್ಲ, ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಮರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.

1. ವಿಧ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವ ಹಾಗಿಲ್ಲ
2. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲವೇ ಸುರಕ್ಷಿತವಾಗಿ ತಲುಪುವ ಬಗ್ಗೆ, ಗಮನವಹಿಸುವುದು.
3. ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.
4. ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ, ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು
5. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ನೀರು ಇರುವ ತನ್ನು ಪ್ರದೇಶ, ಕೆರೆ ತೀರ ಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.


Spread the love
Share:

administrator

Leave a Reply

Your email address will not be published. Required fields are marked *