Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಫೈನಲ್ ಪಂದ್ಯಕ್ಕೂ ಮುನ್ನ RCBಗೆ ಸ್ಪಷ್ಟ ಸಂದೇಶ ನೀಡಿದ ವಿಜಯ್ ಮಲ್ಯ

Spread the love

ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಚಂಡೀಗಢ್​ನ ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 14.1 ಓವರ್​ಗಳಲ್ಲಿ 101 ರನ್ ಬಾರಿಸಿ ಆಲೌಟ್ ಆಯಿತು.

102 ರನ್​ಗಳ ಸುಲಭ ಗುರಿ ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಫಿಲ್ ಸಾಲ್ಟ್ (56) ಸ್ಪೋಟಕ ಆರಂಭ ಒದಗಿಸಿದ್ದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 10 ಓವರ್​ಗಳಲ್ಲಿ 106 ರನ್ ಬಾರಿಸಿ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

ಈ ಗೆಲುವಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಮಾಲೀಕ ವಿಜಯ ಮಲ್ಯ, ಅಭಿನಂದನೆ ಸಲ್ಲಿಸಿದ್ದಾರೆ. ಎಕ್ಸ್​ ಖಾತೆಯನ್ನು ಆರ್​ಸಿಬಿ ತಂಡದ ಪರಾಕ್ರಮವನ್ನು ಕೊಂಡಾಡಿರುವ ಮಲ್ಯ ಫೈನಲ್ ಪಂದ್ಯಕ್ಕೂ ಮುನ್ನ ರಾಯಲ್ ಪಡೆಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಪಂಜಾಬ್ ಕಿಂಗ್ಸ್​ ವಿರುದ್ಧ ಏಕಪಕ್ಷೀಯವಾಗಿ ಗೆಲುವು ಸಾಧಿಸಿ ಐಪಿಎಲ್ ಫೈನಲ್‌ಗೆ ಪ್ರವೇಶಿಸಿದ್ದಕ್ಕಾಗಿ ಆರ್‌ಸಿಬಿಗೆ ಅಭಿನಂದನೆಗಳು. ಒತ್ತಡದ ಸ್ಪರ್ಧೆಯಲ್ಲಿ ಅತ್ಯುತ್ತಮ ಆಲ್-ರೌಂಡ್ ಪ್ರದರ್ಶನ ಇದು. ಪ್ರಶಸ್ತಿಯತ್ತ ಮುಂದುವರಿಯಿರಿ ಎಂದು ವಿಜಯ ಮಲ್ಯ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಫೈನಲ್ ಪಂದ್ಯದಲೂ ಧೈರ್ಯದಿಂದ ಆಡಬೇಕೆಂಬ ಸಂದೇಶವನ್ನು ಸಹ ರವಾನಿಸಿದ್ದಾರೆ. ಇದೀಗ ವಿಜಯ ಮಲ್ಯ ಅವರ ಎಕ್ಸ್ ಪೋಸ್ಟ್ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಗಳು ಸಹ ವ್ಯಕ್ತವಾಗುತ್ತಿದೆ.

ಅಂದಹಾಗೆ ವಿಜಯ್ ಮಲ್ಯ ಅವರು ಆರ್​ಸಿಬಿ ತಂಡದ ಸಂಸ್ಥಾಪಕರು. 2008 ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ತಂಡಗಳ ಬಿಡ್ಡಿಂಗ್​ನಲ್ಲಿ ಮಲ್ಯ ಅವರು ಆರ್​ಸಿಬಿ ತಂಡವನ್ನು 455 ಕೋಟಿ ರೂ. ನೀಡಿ ಖರೀದಿಸಿದ್ದರು.

ಆದರೆ 2016 ರಲ್ಲಿ ಆರ್ಥಿಕ ಮುಗ್ಗಟ್ಟು ಎದುರಿಸಿ ಸಾಲದ ಸುಳಿಗೆ ಸಿಲುಕಿದ ವಿಜಯ ಮಲ್ಯ ಭಾರತದಿಂದ ಪಾಲಾಯನ ಮಾಡಿ, ಈಗ ಇಂಗ್ಲೆಂಡ್​ನಲ್ಲಿ ನೆಲೆಸಿದ್ದಾರೆ. ಇದೀಗ ಆರ್​ಸಿಬಿ ತಂಡದ ಮಾಲೀಕತ್ವವು ಯುನೈಟೆಡ್ ಸ್ಪಿರಿಟ್ಸ್ ಕಂಪೆನಿಯ ಹೆಸರಿನಲ್ಲಿದ್ದರೂ, ತಂಡದ ಮಾಲಕತ್ವದ ಶೇ. 54.8 ರಷ್ಟು ಭಾಗ ಡಿಯಾಜಿಯೊ ಕಂಪೆನಿಯ ಅಧೀನದಲ್ಲಿದೆ.


Spread the love
Share:

administrator

Leave a Reply

Your email address will not be published. Required fields are marked *