Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಎ.18ಕ್ಕೆ ವಕ್ಫ್ ಪ್ರತಿಭಟನೆ: ಮಂಗಳೂರು-ಬೆಂಗಳೂರು ಮಾರ್ಗದ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

Spread the love

ಮಂಗಳೂರು :ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯಿದೆಯ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ಎ.18ರಂದು ಮಂಗಳೂರಿನ ಅಡ್ಯಾರ್‌ ಕಣ್ಣೂರು ಬಳಿ ಇರುವ ಷಾ ಗಾರ್ಡನ್‌ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಯಲಿದ್ದು ಅಡ್ಯಾರು ಕಣ್ಣೂರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ.

ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಅಂದು ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ ವಾಹನಗಳು (ಸ್ಥಳೀಯ, ತುರ್ತು ಹಾಗೂ ಅತ್ಯಗತ್ಯ ಕಾರಣಗಳಿಗೆ ಬರುವ ವಾಹನಗಳನ್ನು ಹೊರತು ಪಡಿಸಿ)ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಡೀಲ್‌ – ಕಣ್ಣೂರು – ಅಡ್ಯಾರ್‌ – ಸಹ್ಯಾದ್ರಿ – ಅರ್ಕುಳ (ಎರಡು ಕಡೆಯಿಂದ) ಮಾರ್ಗಗಳ ಬದಲಾಗಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮಂಗಳೂರು ಪೊಲೀಸ್‌ ಆಯುಕ್ತರು ಸೂಚಿಸಿದ್ದಾರೆ.

ಪಂಪ್‌ವೆಲ್‌ / ನಂತೂರು – ಪಡೀಲ್‌ – ಕಣ್ಣೂರು- ಅಡ್ಯಾರ್‌ – ಸಹ್ಯಾದ್ರಿ – ಅರ್ಕುಳ – ಫ‌ರಂಗಿಪೇಟೆ – ತುಂಬೆ – ಬಿ.ಸಿ.ರೋಡ್‌ (ರಾಷ್ಟ್ರೀಯ ಹೆದ್ದಾರಿ – 73) ರಸ್ತೆಯಲ್ಲಿ ಮಂಗಳೂರು ನಗರಕ್ಕೆ ಬರುವ ಹಾಗೂ ಹೋಗುವ ಘನ ವಾಹನಗಳು, ಎಲ್ಲಾ ತರಹದ ಸರಕು ವಾಹನಗಳು ಹಾಗೂ ಬಸ್‌ಗಳ ಸಂಚಾರಕ್ಕಾಗಿ ಬದಲಿ ಮಾರ್ಗ ಉಪಯೋಗಿಸಬೇಕು.

ಪಡೀಲ್‌ – ಕಣ್ಣೂರು – ಅಡ್ಯಾರ್‌ ಕಟ್ಟೆ ರಸ್ತೆಯಲ್ಲಿ ಮಂಗಳೂರು ನಗರಕ್ಕೆ ಬರುವ ಹಾಗೂ ಹೊರಡುವ ಎಲ್ಲಾ ತರಹದ ಲಘ ವಾಹನಗಳು ಮತ್ತು ದ್ವಿಚಕ್ರ ವಾಹನಗಳ ಚಾಲಕರು / ಸವಾರರು ಬದಲಿ ಮಾರ್ಗ ಉಪಯೋಗಿಸಬೇಕು.
ಪರ್ಯಾಯ ರಸ್ತೆಗಳು
ಮೆಲ್ಕಾರ್‌ ಜಂಕ್ಷನ್‌- ಪುತ್ತೂರು/ಬಂಟ್ವಾಳ/ಬೆಳ್ತಂಗಡಿ ಕಡೆಯಿಂದ ಮಂಗಳೂರು ನಗರ/ ಕಾಸರಗೋಡು ಕಡೆಗೆ ಬರುವ ವಾಹನಗಳು ಮೆಲ್ಕಾರ್‌ ಜಂಕ್ಷನ್‌ – ಬೊಳಿಯಾರ್‌ – ಮುಡಿಪು – ದೇರಳಕಟ್ಟೆ – ತೊಕ್ಕೊಟ್ಟು ಮೂಲಕ ಸಂಚರಿಸಬೇಕು.

ಬಿ.ಸಿ. ರೋಡ್‌ ಪೊಳಲಿ ದ್ವಾರ-ಬಿ.ಸಿ.ರೋಡ್‌ ಕಡೆಯಿಂದ ಮಂಗಳೂರು/ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಪೊಳಲಿ ದ್ವಾರದ ಮೂಲಕ ಕಲ್ಪನೆ ಜಂಕ್ಷನ್‌ – ನೀರುಮಾರ್ಗ – ಬೈತುರ್ಲಿ – ಕುಲಶೇಖರ – ನಂತೂರು ಮೂಲಕ ಸಂಚರಿಸಬೇಕು.

ವಳಚ್ಚಿಲ್‌ ಜಂಕ್ಷನ್‌-ಬಿ.ಸಿ.ರೋಡ್‌ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿûಾ/ಬೈಕ್‌) ವಳಚ್ಚಿಲ್‌ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು – ನೀರುಮಾರ್ಗ – ಬೈತುರ್ಲಿ – ನಂತೂರು ಮೂಲಕ ಸಂಚರಿಸಬೇಕು.

ಅಡ್ಯಾರ್‌ ಕಟ್ಟೆ-ಬಿ.ಸಿ.ರೋಡ್‌ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿûಾ/ಬೆ„ಕ್‌) ಅಡ್ಯಾರ್‌ಕಟ್ಟೆ ಬಳಿ ಎಡಕ್ಕೆ ತಿರುಗಿ ಹರೇಕಳ ಬ್ರಿಡ್ಜ್ – ಕೊಣಾಜೆ – ದೇರಳಕಟ್ಟೆ – ತೊಕ್ಕೊಟ್ಟು ಮೂಲಕ ಸಂಚರಿಸಬೇಕು.

ಪಂಪ್‌ವೆಲ್‌ ಜಂಕ್ಷನ್‌- ಮಂಗಳೂರು ನಗರದ ಕಡೆಯಿಂದ ಬಿ.ಸಿ.ರೋಡ್‌ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟು – ದೇರಳಕಟ್ಟೆ – ಮುಡಿಜಜ – ಬೊಳಿಯಾರ್‌ – ಮೆಲ್ಕಾರ್‌ ಮೂಲಕ ಸಂಚರಿಸಬೇಕು.

ನಂತೂರು ವೃತ್ತ- ಮಂಗಳೂರು ನಗರ / ಸುರತ್ಕಲ್‌ ಕಡೆಯಿಂದ ಬಿ.ಸಿ.ರೋಡ್‌ ಕಡೆಗೆ ಸಂಚರಿಸುವ ವಾಹನಗಳು ಬಿಕರ್ನಕಟ್ಟೆ – ಕುಲಶೇಖರ – ಬೈತುರ್ಲಿ ಜಂಕ್ಷನ್‌ – ನೀರುಮಾರ್ಗ- ಕಲ್ಪನೆ ಜಂಕ್ಷನ್‌- ಬಿ.ಸಿ ರೋಡ್‌ ಕೈಕಂಬದ ಪೊಳಲಿ ದ್ವಾರದ ಮೂಲಕ ಸಂಚರಿಸಬೇಕು.

ಕೆ.ಪಿ.ಟಿ. ವೃತ್ತ- ಮಂಗಳೂರು ನಗರ / ಸುರತ್ಕಲ್‌ ಕಡೆಯಿಂದ ಬಿ.ಸಿ.ರೋಡ್‌ ಕಡೆಗೆ ಸಂಚರಿಸುವ ವಾಹನಗಳು ಪದವಿನಂಗಡಿ – ಪಚ್ಚನಾಡಿ – ವಾಮಂಜೂರು – ಬೈತುರ್ಲಿ ಜಂಕ್ಷನ್‌ – ನೀರುಮಾರ್ಗ- ಕಲ್ಪನೆ ಮೂಲಕ ಅಥವಾ ಬೋಂದೆಲ್‌ – ಕಾವೂರು – ಬಜಪೆ – ಕೈಕಂಬ – ಮೂಡುಬಿದಿರೆ ಮೂಲಕ ಸಂಚರಿಸಬೇಕು.

ಮೂಲ್ಕಿ ವಿಜಯಸನ್ನಿಧಿ- ಉಡುಪಿ / ಮೂಲ್ಕಿ ಕಡೆಯಿಂದ ಬಿ.ಸಿ.ರೋಡ್‌ ಕಡೆಗೆ ಸಂಚರಿಸುವ ವಾಹನಗಳು ಕಿನ್ನಿಗೊಳಿ – ಮೂಡುಬಿದಿರೆ – ಸಿದ್ದಕಟ್ಟೆ – ಬಂಟ್ವಾಳ ಮೂಲಕ ಸಂಚರಿಸಬೇಕು.

ಪಡುಬಿದ್ರಿ – ಉಡುಪಿ ಕಡೆಯಿಂದ ಬಿ.ಸಿ.ರೋಡ್‌ ಕಡೆಗೆ ಸಂಚರಿಸುವ ವಾಹನಗಳು ಕಾರ್ಕಳ – ಮೂಡುಬಿದಿರೆ- ಸಿದ್ದಕಟ್ಟೆ – ಬಂಟ್ವಾಳ ಮೂಲಕ ಸಂಚರಿಸಬೇಕು.


Spread the love
Share:

administrator

Leave a Reply

Your email address will not be published. Required fields are marked *