Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಜ ರಘುವಂಶಿ ತಾಯಿಗೆ ಸೋನಮ್ ಸಹೋದರ ಮಾಡಿದ ಪ್ರಾಮಿಸ್ ಏನು?

Spread the love

ಮೇಘಾಲಯ ಹನಿಮೂನ್ ಕೊಲೆ ಪ್ರಕರಣ ದೇಶದಲ್ಲೇ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಹನಿಮೂನ್ ಹೆಸರಿನಲ್ಲಿ ತನ್ನ ಪತಿ ರಾಜಾ ರಘುವಂಶಿಯನ್ನು ಮೇಘಾಲಯಕ್ಕೆ ಕರೆದೊಯ್ದ ಪತ್ನಿ ಸೋನಮ್, ಸುಪಾರಿ ಹಂತಕರನ್ನು ನೇಮಿಸಿ ಕೊಲೆ ಮಾಡಿಸಿದ್ದಾಳೆ.

ಈ ಸುದ್ದಿ ದೇಶದೆಲ್ಲೆಡೆ ಸಂಚಲನ ಮೂಡಿಸಿದ್ದು, ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಸೋನಮ್ ತನ್ನ ಪ್ರಿಯಕರನಿಗಾಗಿ ಈ ದುಷ್ಕೃತ್ಯ ಎಸಗಿದ್ದಾಳೆ. ರಾಜಾ ರಘುವಂಶಿ ಬರ್ಬರ ಹತ್ಯೆಯಿಂದಾಗಿ ಅವರ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ. ಅದರಲ್ಲೂ ರಾಜಾ ಅವರ ತಾಯಿ ಮಗನನ್ನು ನೆನೆಸಿಕೊಂಡು ಗೊಳೋ ಅಂತ ಕಣ್ಣೀರಿಡುತ್ತಿದ್ದಾರೆ. ನನ್ನ ಮಗ ಮಾಡಿದ ತಪ್ಪಾದರೂ ಏನು? ಅವನನ್ನು ಏಕೆ ಕೊಂದರು? ಎಂದು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಆರೋಪಿ ಸೋನಮ್​ ರಘುವಂಶಿಯ ಸಹೋದರ ಗೋವಿಂದ್, ಇಂದೋರ್‌ಗೆ ಭೇಟಿ ನೀಡಿ, ರಾಜಾ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ರಾಜಾ ಅವರ ತಾಯಿ ಉಮಾ ಅವರನ್ನು ನೋಡುತ್ತಿದ್ದಂತೆ ಗೋವಿಂದ್​ ಕಣ್ಣೀರು ಹಾಕಿದರು. ಇಬ್ಬರೂ ಪರಸ್ಪರ ಅಪ್ಪಿಕೊಂಡು ಬಿಕ್ಕಿ ಬಿಕ್ಕಿ ಅಳುತ್ತಿದ್ದರು. ಈ ವೇಳೆ ಗೋವಿಂದ್, ರಾಜಾ ರಘುವಂಶಿ ತಾಯಿತ ಬಳಿ ಕ್ಷಮೆಯಾಚಿಸಿದರು. ಅಮ್ಮ ಎಂದು ಕರೆದು ಒಂದು ಭರವಸೆ ನೀಡಿದರು. ನಾನೇ ಖುದ್ದಾಗಿ ತನಿಖೆಗೆ ಹೋಗುತ್ತೇನೆ ಮತ್ತು ಸೋನಮ್‌ಗೆ ಶಿಕ್ಷೆಯಾಗುವವರೆಗೂ ಬಿಡುವುದಿಲ್ಲ ಎಂದರು.

ಇದೇ ವೇಳೆ ಗೋವಿಂದ್​ನನ್ನು ನೋಡಿ ರಾಜಾ ಅವರ ತಾಯಿ ಉಮಾ ಕಣ್ಣೀರು ಹಾಕಿದರು. ಸೋನಮ್​ ಹೀಗೆ ಮಾಡುತ್ತಾಳೆಂದು ನಾನು ಎಂದಿಗೂ ಊಹಿಸಿರಲಿಲ್ಲ ಎನ್ನುತ್ತಾ ಅಳುತ್ತಿದ್ದರು. ಸೋನಮ್​ ಸಹೋದರ ಗೋವಿಂದ್ ನಿನ್ನೆ ನಮ್ಮೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.
ಇಂದು ನಮ್ಮ ಮನೆಗೆ ಬರುವುದಾಗಿ ಹೇಳಿದರು. ಹೇಳಿದಂತೆ ಇಂದು ನಮ್ಮ ಮನೆಗೆ ಬಂದು ನಮ್ಮ ತಾಯಿಯ ಬಳಿ ಕ್ಷಮೆಯಾಚಿಸಿದರು ಎಂದು ರಾಜಾ ರಘುವಂಶಿ ಸಹೋದರ ವಿಪಿನ್ ರಘುವಂಶಿ ಹೇಳಿದರು.

ಇಂದು (ಜೂನ್​ 11) ಸೋನಮ್ ಮತ್ತು ಇತರ ನಾಲ್ವರು ಆರೋಪಿಗಳನ್ನು ಮೇಘಾಲಯದ ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಕೊಲೆಯ ಬಗ್ಗೆ ಹೆಚ್ಚಿನ ತನಿಖೆಗಾಗಿ ಪೊಲೀಸರು ತಮ್ಮ ಕಸ್ಟಡಿಗೆ ಕೋರಿದ್ದಾರೆ. ಪ್ರಮುಖ ಆರೋಪಿ ಸೋನಮ್ ಪ್ರಿಯಕರ ರಾಜ್ ಕುಶ್ವಾಹ, ಹಂತಕರಿಗೆ 50,000 ರೂ.ಗಳನ್ನು ನೀಡಿದ್ದಾನೆ ಎಂದು ಮಧ್ಯಪ್ರದೇಶ ಅಪರಾಧ ವಿಭಾಗದ ತನಿಖೆಯಿಂದ ತಿಳಿದುಬಂದಿದೆ.

ರಾಜ್ ಕುಶ್ವಾಹ ಈ ಯೋಜನೆಯನ್ನು ಕಾರ್ಯಗತಗೊಳಿಸಲು ಹಲ್ಲೆಕೋರರಿಗೆ 50,000 ರೂ.ಗಳನ್ನು ನೀಡಿದ್ದಾನೆ. ಹೋಟೆಲ್ ವಸತಿ ಸೇರಿದಂತೆ ಅವರ ಪ್ರಯಾಣ ವೆಚ್ಚವನ್ನೂ ಆತನೇ ಭರಿಸಿದ್ದಾನೆ. ಘಟನೆಯ ನಂತರ, ಇಂದೋರ್‌ಗೆ ಮರಳಲು ಪ್ರತ್ಯೇಕ ರೈಲುಗಳಲ್ಲಿ ಪ್ರಯಾಣಿಸಿದರು. ಅಲ್ಲದೆ, ಘಟನೆಯ ನಂತರ, ತಮ್ಮ ಮೊಬೈಲ್ ಫೋನ್‌ಗಳನ್ನು ಸಹ ನಾಶಪಡಿಸಿದರು ಎಂದು ಅಪರಾಧ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂದಹಾಗೆ, ಮಧ್ಯಪ್ರದೇಶದ ಇಂದೋರ್‌ ಮೂಲದ ರಾಜಾ ರಘುವಂಶಿ ಮತ್ತು ಸೋನಮ್ ಮೇ 11 ರಂದು ವಿವಾಹವಾದರು. ಅದೇ ತಿಂಗಳು 20 ರಂದು ಅವರು ತಮ್ಮ ಹನಿಮೂನ್‌ಗಾಗಿ ಮೇಘಾಲಯಕ್ಕೆ ತೆರಳಿದರು. ಆರಂಭದಲ್ಲಿ, ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಲು ಯೋಜಿಸಿದ್ದರು. ಆದರೆ, ಪಹಲ್ಗಾಮ್ ಭಯೋತ್ಪಾದಕ ದಾಳಿ ಇಂದು (ಜೂನ್​ 11) ಸೋನಮ್ ಮತ್ತು ಇತರ ನಾಲ್ವರು ಆರೋಪಿಗಳನ್ನು ಮೇಘಾಲಯದ ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಕೊಲೆಯ ಬಗ್ಗೆ ಹೆಚ್ಚಿನ ತನಿಖೆಗಾಗಿ ಪೊಲೀಸರು ತಮ್ಮ ಕಸ್ಟಡಿಗೆ ಕೋರಿದ್ದಾರೆ. ಪ್ರಮುಖ ಆರೋಪಿ ಸೋನಮ್ ಪ್ರಿಯಕರ ರಾಜ್ ಕುಶ್ವಾಹ, ಹಂತಕರಿಗೆ 50,000 ರೂ.ಗಳನ್ನು ನೀಡಿದ್ದಾನೆ ಎಂದು ಮಧ್ಯಪ್ರದೇಶ ಅಪರಾಧ ವಿಭಾಗದ ತನಿಖೆಯಿಂದ ತಿಳಿದುಬಂದಿದೆ.

ರಾಜ್ ಕುಶ್ವಾಹ ಈ ಯೋಜನೆಯನ್ನು ಕಾರ್ಯಗತಗೊಳಿಸಲು ಹಲ್ಲೆಕೋರರಿಗೆ 50,000 ರೂ.ಗಳನ್ನು ನೀಡಿದ್ದಾನೆ. ಹೋಟೆಲ್ ವಸತಿ ಸೇರಿದಂತೆ ಅವರ ಪ್ರಯಾಣ ವೆಚ್ಚವನ್ನೂ ಆತನೇ ಭರಿಸಿದ್ದಾನೆ. ಘಟನೆಯ ನಂತರ, ಇಂದೋರ್‌ಗೆ ಮರಳಲು ಪ್ರತ್ಯೇಕ ರೈಲುಗಳಲ್ಲಿ ಪ್ರಯಾಣಿಸಿದರು. ಅಲ್ಲದೆ, ಘಟನೆಯ ನಂತರ, ತಮ್ಮ ಮೊಬೈಲ್ ಫೋನ್‌ಗಳನ್ನು ಸಹ ನಾಶಪಡಿಸಿದರು ಎಂದು ಅಪರಾಧ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂದಹಾಗೆ, ಮಧ್ಯಪ್ರದೇಶದ ಇಂದೋರ್‌ ಮೂಲದ ರಾಜಾ ರಘುವಂಶಿ ಮತ್ತು ಸೋನಮ್ ಮೇ 11 ರಂದು ವಿವಾಹವಾದರು. ಅದೇ ತಿಂಗಳು 20 ರಂದು ಅವರು ತಮ್ಮ ಹನಿಮೂನ್‌ಗಾಗಿ ಮೇಘಾಲಯಕ್ಕೆ ತೆರಳಿದರು. ಆರಂಭದಲ್ಲಿ, ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಲು ಯೋಜಿಸಿದ್ದರು. ಆದರೆ, ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದಿದ್ದರಿಂದ ಮೇಘಾಲಯಕ್ಕೆತಮ್ಮ ಪ್ಲಾನ್​ ಬದಲಾಯಿಸಿದರು. ನವದಂಪತಿ ಮೇ 20 ರಂದು ತಮ್ಮ ಹನಿಮೂನ್‌ಗೆ ಮೇಘಾಲಯಕ್ಕೆ ತೆರಳಿದರು. ಮೇ 23 ರಂದು ತಮ್ಮ ವಸತಿಗೃಹದಿಂದ ಸ್ಕೂಟಿಯಲ್ಲಿ ಹೊರಟು ಇದ್ದಕ್ಕಿದ್ದಂತೆ ನಾಪತ್ತೆಯಾದರು. ಸ್ಕೂಟರ್ ಒಂದು ಹಳ್ಳಿಯ ಹೊರವಲಯದಲ್ಲಿ ಪತ್ತೆಯಾಗಿತ್ತು. ಆದಾಗ್ಯೂ, ಅವರು ಕಣ್ಮರೆಯಾದ 11 ದಿನಗಳ ನಂತರ (ಜೂನ್ 2 ರಂದು), ಪೊಲೀಸರು ರಘುವಂಶಿ ಅವರ ಶವವನ್ನು ಸೊಹ್ರಾದಲ್ಲಿನ ಜಲಪಾತದ ಬಳಿಯ ಆಳವಾದ ಕಣಿವೆಯಲ್ಲಿ ಪತ್ತೆ ಮಾಡಿದರು. ಅವರ ದೇಹದ ಮೇಲೆ ಚಾಕುವಿನಿಂದಾದ ಗಾಯಗಳಿದ್ದ ಕಾರಣ, ಪೊಲೀಸರು ಕೊಲೆ ಎಂದು ಶಂಕಿಸಿದರು. ಸೋನಮ್ ಎಲ್ಲಿದ್ದಾರೆಂದು ಪತ್ತೆಯಾಗದ ಕಾರಣ ಎಲ್ಲರೂ ಭಯಭೀತರಾಗಿದ್ದರು. ಈ ಮಧ್ಯೆ, ವಿಶೇಷ ಪಡೆ ಆಕೆಗಾಗಿ ಕಾಡಿನಲ್ಲಿ ಹುಡುಕಾಟ ನಡೆಸಿತು. ಮತ್ತೊಂದೆಡೆ, ಪೊಲೀಸರು ಪ್ರಕರಣದ ತನಿಖೆಯ ವೇಗವನ್ನು ಹೆಚ್ಚಿಸಿದರು.

ಸೋನಮ್ ಮತ್ತು ಕುಶ್ವಾಹ ಅವರ ಯೋಜನೆಯಂತೆಯೇ ಎಲ್ಲವೂ ನಡೆಯಿತು. ಆದರೆ, ಕೊಲೆಗೆ ಅವರು ಬಳಸಿದ್ದ ಹರಿತವಾದ ಆಯುಧ ಎಲ್ಲವನ್ನೂ ತಲೆಕೆಳಗು ಮಾಡಿತು. ರಘುವಂಶಿ ಕೊಲೆ ಪ್ರಕರಣದ ತನಿಖೆಯ ಸಮಯದಲ್ಲಿ, ಸೋನಮ್ ಜೀವಂತವಾಗಿದ್ದಾಳೆ ಎಂಬ ಅನುಮಾನ ಮೂಡಿತು. ಅಲ್ಲದೆ, ಆಕೆಯೇ ಕೊಲೆ ಮಾಡಿರಬಹುದು ಎಂಬ ಅನುಮಾನವನ್ನು ಹುಟ್ಟುಹಾಕಿತು. ಸಾಮಾನ್ಯವಾಗಿ, ಮೇಘಾಲಯದಲ್ಲಿ ಅಂತಹ ಆಯುಧವನ್ನು ಬಳಸಲಾಗುವುದಿಲ್ಲ. ಹೀಗಾಗಿ ಹೊರಗಿನವರು ತಮ್ಮ ಪ್ಲಾನ್ ಭಾಗಿಯಾಗಿರುವ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿತು. ಬಳಿ ಕರೆ ದಾಖಲೆಗಳನ್ನು ಪರಿಶೀಲಿಸಿದಾಗ ಸೋನಮ್​, ರಾಜ್ ಕುಶ್ವಾಹ ಜತೆ ನಿಯಮಿತವಾಗಿ ಸಂಪರ್ಕದಲ್ಲಿರುವುದು ತಿಳಿದುಬಂತು. ಸೋನಮ್, ರಾಜಾ ರಘುವಂಶಿ ಅವರ ತಾಯಿಯೊಂದಿಗೆ ಮಾತನಾಡಿದ ಕೊನೆಯ ಮಾತುಗಳು ಸಹ ಪೊಲೀಸರಿಗೆ ಅನುಮಾನ ಉಂಟುಮಾಡಿದವು. ಅಲ್ಲದೆ, ಅವರಿಬ್ಬರೂ ಒಟ್ಟಿಗೆ ಇರುವ ಫೋಟೋಗಳ ಯಾವುದೇ ಸ್ಟೇಟಸ್‌ಗಳನ್ನು ಪೋಸ್ಟ್ ಮಾಡದ ಕಾರಣ ಅನುಮಾನಗಳು ಇನ್ನಷ್ಟು ಬಲಗೊಂಡವು ಎಂದು ಪೊಲೀಸ್ ಅಧಿಕಾರಿ ಬಹಿರಂಗಪಡಿಸಿದರು.

ಈ ಪ್ರಕರಣದಲ್ಲಿ ಮತ್ತೊಂದು ಪ್ರಮುಖ ಸಂಗತಿ ಬೆಳಕಿಗೆ ಬಂದಿದೆ. ಅದೇನೆಂದರೆ, ಈ ಪ್ರಕರಣದಲ್ಲಿ ಆರೋಪಿಯಾಗಿರುವ ರಾಜ್ ಕುಶ್ವಾಹ ಕೂಡ ಮೃತ ರಾಜಾ ರಘುವಂಶಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ. ಈ ವಿಡಿಯೋವನ್ನು ಮೃತರ ಸಹೋದರಿಯೊಬ್ಬರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಂದಹಾಗೆ, ಸೋನಮ್ ತನ್ನ ತಂದೆಯ ಕಂಪನಿಯಲ್ಲಿ ಕೆಲಸ ಮಾಡುವ ರಾಜ್ ಕುಶ್ವಾಹನನ್ನು ಪ್ರೀತಿಸುತ್ತಿದ್ದಳು. ಆದರೆ, ಆ ಬಗ್ಗೆ ಹಿರಿಯರಿಗೆ ಹೇಳುವ ಧೈರ್ಯ ಇರಲಿಲ್ಲ. ಆದ್ದರಿಂದ, ಅವಳು ರಾಜಾ ರಘುವಂಶಿಯನ್ನು ಮದುವೆಯಾದಳು. ಬಳಿಕ ತಮ್ಮ ಪ್ರೇಮಕ್ಕೆ ರಘುವಂಶಿ ಅಡ್ಡಿಯಾಗುತ್ತಾನೆಂದು ಭಾವಿಸಿ, ಆತನನ್ನು ಕೊಲ್ಲಲು ಸೋನಮ್ ಮತ್ತು ಕುಶ್ವಾಹ ಸಂಚು ರೂಪಿಸಿದರು. ಅದನ್ನು ಕಾರ್ಯಗತಗೊಳಿಸಲು, ಸುಪಾರಿ ಹಂತಕರನ್ನು ಏರ್ಪಡಿಸಿದರು.

ಸೋನಮ್​ ಮೇಘಾಲಯಕ್ಕೆ ಹನಿಮೂನ್​ ಪ್ಲಾನ್​ ಮಾಡಿದಳು. ಆದರೆ, ಕುಶ್ವಾಹ ಮೇಘಾಲಯಕ್ಕೆ ಹೋಗಲಿಲ್ಲ. ಬದಲಾಗಿ ಫೋನ್‌ನಲ್ಲಿ ಸೋನಮ್ ಜೊತೆ ಸಂಪರ್ಕದಲ್ಲಿದ್ದನು. ಯೋಜನೆಯ ಪ್ರಕಾರ, ಸೋನಮ್, ರಾಜಾ ರಘುವಂಶಿಯನ್ನು ಚಿರಾಪುಂಜಿಯ ಸಂಚಾರವಿಲ್ಲದ ರಸ್ತೆಗೆ ಕರೆದೊಯ್ದಳು. ಅಲ್ಲಿ, ಸುಪಾರಿ ಹಂತಕರು ಆತನನ್ನು ಕೊಂದರು. ನಂತರ, ಸೋನಮ್ ಸೇರಿದಂತೆ ಮೂವರು ಆರೋಪಿಗಳು ಅಸ್ಸಾಂನ ಗುವಾಹಟಿಗೆ ಹೋಗಿ, ಅಲ್ಲಿಂದ ಬೇರೆ ಬೇರೆಯಾದರು. ಈ ನಡುವೆ ಸೋನಮ್, ಪೊಲೀಸರಿಗೆ ರಘುವಂಶಿಯನ್ನು ತಾನು ಕೊಂದಿಲ್ಲ, ಬದಲಿಗೆ ಯಾರೋ ಅವರನ್ನು ಅಪಹರಿಸಿದ್ದಾರೆ ಎಂದು ಹೇಳಿದಳು. ಆದರೆ, ತನಿಖೆಯಲ್ಲಿ ಆಕೆಯ ಕಳ್ಳಾಟ ಎಲ್ಲವು ಬಯಲಾಯಿತು.

ಮತ್ತೊಂದೆಡೆ, ಈ ಪ್ರಕರಣದಲ್ಲಿ ಇಂದೋರ್‌ನ ವಿಶಾಲ್ ಸಿಂಗ್ ಚೌಹಾಣ್ (22), ಉತ್ತರ ಪ್ರದೇಶದ ಲಲಿತಪುರದ ರಾಜ್ ಸಿಂಗ್ ಕುಶ್ವಾಹ (21) ಮತ್ತು ಆಕಾಶ್ ರಜಪೂತ್ (19) ಎಂಬುವರನ್ನು ಬಂಧಿಸಲಾಗಿದೆ. ಮತ್ತೊಂದೆಡೆ, ದೃಶ್ಯ ಪುನರ್ನಿರ್ಮಾಣಕ್ಕಾಗಿ ಪೊಲೀಸರು ಎಲ್ಲ ಆರೋಪಿಗಳನ್ನು ಮೇಘಾಲಯಕ್ಕೆ ಕರೆದೊಯ್ದರು. ಈ ಪ್ರಕ್ರಿಯೆಯಲ್ಲಿ, ಆಕೆಯನ್ನು ವಿಮಾನದಲ್ಲಿ ಕರೆದೊಯ್ಯುವ ದೃಶ್ಯಗಳು ವೈರಲ್ ಆಗುತ್ತಿವೆ


Spread the love
Share:

administrator

Leave a Reply

Your email address will not be published. Required fields are marked *