Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೌಟುಂಬಿಕ ಕಲಹ ಮತ್ತು ವಿಚ್ಛೇದನಕ್ಕೆ ಸಿದ್ಧತೆ ಹಿನ್ನೆಲೆಯಲ್ಲಿ ಕೆರಳಿದ ಪತಿಯಿಂದ ಪತ್ನಿಯ ಬರ್ಬರ ಕೊಲೆ

Spread the love

ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ಗಂಡನನ್ನು ಬಿಟ್ಟು ತವರು ಮನೆ ಸೇರಿದ್ದ ಪತ್ನಿಯನ್ನು ಆಕೆಯ ಪತಿಯೇ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣ ಸಮೀಪದ ಹವ್ವಳ್ಳಿ ಗ್ರಾಮದಲ್ಲಿ ನಡೆದಿದೆ . ಹವ್ವಳ್ಳಿ ಗ್ರಾಮದ 34 ವರ್ಷದ ನೇತ್ರಾವತಿ ಎಂಬವರು ಸಕಲೇಶಪುರ ನವೀನ್ ಜೊತೆ ಕಳೆದ 5 ತಿಂಗಳ ಹಿಂದೆ ವಿವಾಹವಾಗಿದ್ದರು. ಆದರೆ, ಮದುವೆಯಾದ ಕೆಲ‌‌ ದಿನಗಳಲ್ಲಿ ಗಂಡನಿಂದ ದೂರವಾದ ನೇತ್ರಾವತಿ, ತನ್ನ ಹವ್ವಳ್ಳಿ ಗ್ರಾಮದ ತವರು ಮನೆ ಸೇರಿದ್ದರು. ನವೀನ್, ನೇತ್ರಾವತಿಯ ಕುಟುಂಬದ ಹಿರಿಯರು ರಾಜಿ ಪಂಚಾಯಿತಿ ಮಾಡಿ ಇಬ್ಬರನ್ನು ಒಂದು ಮಾಡುವ ಪ್ರಯತ್ನ ಮಾಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಗಂಡ ನವೀನ್​ನಿಂದ‌ ಸಂಪೂರ್ಣ ‌ದೂರವಾಗುವ ಯೋಚನೆ ಮಾಡಿದ್ದ ನೇತ್ರಾವತಿ ವಿಚ್ಛೇದನ ನೀಡಲು ಸಿದ್ದತೆ ನಡೆಸಿದ್ದರು. ಮೂರು ದಿನಗಳ‌ ಹಿಂದೆ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪತಿ‌ ನವೀನ್ ವಿರುದ್ಧ ಕಿರುಕುಳದ ದೂರು ನೀಡಿದ್ದರು. ಪೊಲೀಸರು ದೂರು ಸ್ವೀಕರಿಸಿದ್ದರು. ವಿಚ್ಛೇದನ ಮತ್ತು ಪೊಲೀಸರಿಗೆ ದೂರು ನೀಡಿರುವ ವಿಷಯ ತಿಳಿದ ಪತಿ ನವೀನ್ ಪತ್ನಿ ನೇತ್ರಾವತಿಯ ಪ್ರಾಣವನ್ನೇ ತೆಗೆದಿದ್ದಾನೆ.

ಆಲ್ದೂರು ಠಾಣೆಯಲ್ಲಿ ತನ್ನ ವಿರುದ್ಧ ದೂರು ನೀಡಿರುವ ವಿಷಯ ತಿಳಿದ ನವೀನ್ ಸಕಲೇಶಪುರದಿಂದ ಆಲ್ದೂರು ಪಟ್ಟಣಕ್ಕೆ ಬಂದಿದ್ದ. ಆಲ್ದೂರಿನಿಂದ‌ ಎರಡು ಕಿಮೀ ದೂರದಲ್ಲಿರುವ ಹವ್ವಳ್ಳಿ ಗ್ರಾಮದ ನೇತ್ರಾವತಿ ಮನೆಗೆ ಹಿಂಭಾಗದಿಂದ ತೆರಳಿದ್ದ. ಮನೆಯ ಹಿಂಭಾಗದಲ್ಲಿ ಕೆಲಸ‌ಮಾಡುತ್ತಿದ್ದ ನೇತ್ರಾವತಿ ಮೇಲೆ ನವೀನ್ ‌ ಊರಿನಿಂದ ತನ್ನ ಜೊತೆಯಲ್ಲಿ ‌ತಂದಿದ್ದ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ. ಕುತ್ತಿಗೆ ಹಾಗೂ ಎದೆ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ನೇತ್ರಾವತಿ ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಸದ್ಯ ಆಲ್ದೂರು ಪೊಲೀಸ್ ಠಾಣೆಯಲ್ಲಿ ನವೀನ್ ವಿರುದ್ಧ ಪ್ರಕರಣ ‌ದಾಖಲಾಗಿದ್ದು, ಆತನ ಬಂಧನಕ್ಕೆ ಪೊಲೀಸರು ‌ ಬಲೆ ಬೀಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *