Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹೋಟೆಲ್‌ಗೆ ತೆರಳುತ್ತಿದ್ದ ಪತ್ನಿ ಚಾಕು ಇರಿತಕ್ಕೆ ಬಲಿ: ಕಲಬುರಗಿಯಲ್ಲಿ ಭೀಕರ ಘಟನೆ

Spread the love

ಕಲಬುರಗಿ: ಪತ್ನಿಯ ಶೀಲದ ಬಗ್ಗೆ ಶಂಕಿಸಿ ಪತಿ ಆಕೆಯನ್ನು ರಸ್ತೆ ಮಧ್ಯೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಶಹಾಬಜಾರ್ ಬಡಾವಣೆಯಲ್ಲಿ ನಡೆದಿದೆ.

ಕಲಬುರಗಿ ತಾಲೂಕಿನ ಕಲ್ಲಹಂಗರಗಾ ಗ್ರಾಮದ ರೂಪಾ (32) ಕೊಲೆಯಾಗಿರುವ ಮಹಿಳೆ. ಪತಿ ವೆಂಕಟೇಶ್ ಕೊಲೆ ಮಾಡಿದ ಆರೋಪಿ. ಆರೋಪಿ ವೆಂಕಟೇಶ್ 10 ವರ್ಷಗಳ ಹಿಂದೆ ರೂಪಾಳನ್ನು ಮದುವೆಯಾಗಿದ್ದ. 3 ತಿಂಗಳ ಹಿಂದೆಯೇ ಪತ್ನಿಯ ಶೀಲ ಶಂಕಿಸಿ ಆಕೆಯೊಂದಿಗೆ ವೆಂಕಟೇಶ್ ಜಗಳವಾಡಿದ್ದ. ಇದರಿಂದ ಬೇಸತ್ತ ರೂಪಾ ಪತಿಯನ್ನು ಬಿಟ್ಟು ತನ್ನ ಮಕ್ಕಳೊಂದಿಗೆ ಶಹಾಬಜಾರ್ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಿದ್ದಳು.

ಜೀವನ ನಿರ್ವಹಣೆಗಾಗಿ ಹೋಟೆಲ್‌ನಲ್ಲಿ ಸಮೋಸ ಮಾಡುತ್ತಿದ್ದ ರೂಪಾ, ಮಂಗಳವಾರ ಬೆಳಗ್ಗೆ 8:30ರ ಆಸುಪಾಸಿನಲ್ಲಿ ನಡೆದುಕೊಂಡು ಹೋಟೆಲ್‌ಗೆ ತೆರಳುತ್ತಿದ್ದಾಗ ಅಲ್ಲಿಗೆ ಬಂದ ಆಕೆಯ ಪತಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.ವೆಂಕಟೇಶ್, ಪತ್ನಿಗೆ ಚಾಕು ಇರಿದು ಬೈಕ್‌ನಲ್ಲಿ ಪರಾರಿಯಾಗುತ್ತಿರುವ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಯ ಆಧಾರದ ಮೇಲೆ ವೆಂಕಟೇಶ್ ವಿರುದ್ಧ ಚೌಕ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಕಮೀಷನರ್ ಡಾ.ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *