Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮದುವೆಯಾದ ಮೂರು ದಿನದಲ್ಲೇ ಯುವ ವರನ ಅಕಾಲಿಕ ನಿಧನ

Spread the love

ಮಂಡ್ಯ: ಮೂರು ದಿನದ ಹಿಂದೆ ಹಸೆಮಣೆ ಏರಿದ್ದ ಯುವಕ ಹೃದಯಾಘಾತದಿಂದ ನಿಧನರಾದ ಘಟನೆ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಶಶಾಂಕ್(28), ಮೃತ ವರ.

ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರನಾಗಿದ್ದ ಶಶಾಂಕ್, ಕಳೆದ ಭಾನುವಾರ ಹಸೆಮಣೆ ಏರಿದ್ದ. ಜಾರ್ಖಂಡ್ ಮೂಲದ ಯುವತಿಯನ್ನ ಪ್ರೀತಿಸಿ ಮದುವೆಯಾಗಿದ್ದ. ಮದುವೆಯಾದ ಬೆನ್ನಲ್ಲೇ ಶಶಾಂಕ್ ಇಹಲೋಕ ತ್ಯಜಿಸಿದ್ದಾನೆ.

ಇಂದು ಕೆ.ಆರ್.ಪೇಟೆಯಲ್ಲಿ ಶಶಾಂಕ್​ನ ಅಂತ್ಯಸಂಸ್ಕಾರ ನಡೆಯಲಿದೆ. ಮಗನ ಮದುವೆ ಸಂಭ್ರಮದಲ್ಲಿದ್ದ ಪೋಷಕರು ಕಂಗಾಲಾಗಿದ್ದಾರೆ. ಖುಷಿಯಿಂದ ತೇಲಾಡುತ್ತಿದ್ದ ಮದುವೆ ಮನೆಯಲ್ಲಿ ದುಃಖ ಆವರಿಸಿದೆ. ಸಂಬಂಧಿಕರೆಲ್ಲ ವಿಷಯ ತಿಳಿದು ಆಘಾತ ವ್ಯಕ್ತಪಡಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *