ಕಾಸರಗೋಡಿನಲ್ಲಿ ರೈಲು ಬಡಿದು ಯುವತಿ ದುರ್ಮರಣ

ಕಾಸರಗೋಡು : ರೈಲು ಬಡಿದು ಯುವತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಪಳ್ಳಿಕೆರೆಯಲ್ಲಿ ನಡೆದಿದೆ. ಚೆರ್ವತ್ತೂರು ತುರುತ್ತಿ ಅಲಿಪ್ಪುರದ ಕೀರ್ತನಾ (24) ಮೃತಪಟ್ಟವರು.
ರವಿವಾರ ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬಳಿಕ ಸಂಬಂಧಿಕರು ಅಗಮಿಸಿ ಮೃತ ದೇಹದ ಗುರುತು ಪತ್ತೆಹಚ್ಚಿದ್ದಾರೆ. ಕೀರ್ತನಾ ತಾತ್ಕಾಲಿಕ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಪೊಲೀಸರು ಮಹಜರು ನಡೆಸಿ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ನೀಲೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.