Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಿಜೆಪಿ ನಾಯಕ ಅಣ್ಣಾಮಲೈಯಿಂದ ಪದಕ ಸ್ವೀಕರಿಸಲು ನಿರಾಕರಿಸಿದ ಯುವಕ

Spread the love

ಚೆನ್ನೈ: ತಮಿಳುನಾಡು ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರ ಪುತ್ರ ಸೂರ್ಯ ರಾಜ ಬಾಲು, ಬಿಜೆಪಿಯ ಅಣ್ಣಾಮಲೈ ಅವರಿಂದ ಪ್ರಶಸ್ತಿ ಪದಕ ಹಾಕಿಸಿಕೊಳ್ಳಲು ನಿರಾಕರಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. 51ನೇ ರಾಜ್ಯ ಶೂಟಿಂಗ್ ಕ್ರೀಡಾಕೂಟದಲ್ಲಿ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರ ಕುತ್ತಿಗೆಗೆ ಪದಕ ಹಾಕಿಕೊಳ್ಳಲು ನಿರಾಕರಿಸಿ, ಅದನ್ನು ಕೈಯಲ್ಲಿ ಸ್ವೀಕರಿಸಿದ್ದಾನೆ. ಸ್ವಲ್ಪ ದಿನಗಳ ಹಿಂದೆ ಇದೇ ರೀತಿಯ ಘಟನೆ ನಡೆದಿತ್ತು. ತಿರುನಲ್ವೇಲಿಯ ಮನೋನ್ಮಣಿಯಂ ಸುಂದರನಾರ್ ವಿಶ್ವವಿದ್ಯಾಲಯದ 32 ನೇ ಘಟಿಕೋತ್ಸವದಲ್ಲಿ, ಡಾಕ್ಟರೇಟ್ ವಿದ್ಯಾರ್ಥಿನಿ ಜೀನ್ ಜೋಸೆಫ್ ವೇದಿಕೆಯಲ್ಲಿ ರಾಜ್ಯಪಾಲ ಆರ್.ಎನ್. ರವಿ ಅವರಿಂದ ಪದವಿ ಪಡೆಯುವ ಬದಲು ಅವರ ಹಿಂದೆ ನಡೆದುಕೊಂಡು ಹೋಗಿ ಕುಲಪತಿಗಳಿಂದ ಪದವಿ ಪಡೆದಿದ್ದರು.


Spread the love
Share:

administrator

Leave a Reply

Your email address will not be published. Required fields are marked *